Webdunia - Bharat's app for daily news and videos

Install App

ಆರ್ ಜಿ ಕರ್ ಆಸ್ಪತ್ರೆಯ ಸಂದೀಪ್ ಘೋಷ್ ಐಷಾರಾಮಿ ಬಂಗಲೆ ನೋಡಿ ದಂಗಾದ ಇಡಿ ಅಧಿಕಾರಿಗಳು

Krishnaveni K
ಶನಿವಾರ, 7 ಸೆಪ್ಟಂಬರ್ 2024 (09:18 IST)
ಕೋಲ್ಕತ್ತಾ: ಟ್ರೈನಿ ವೈದ್ಯೆ ಹತ್ಯೆ ಬಳಿಕ ಬೆಳಕಿಗೆ ಬಂದ ಆರ್ ಜಿ ಕರ್ ಆಸ್ಪತ್ರೆಯ ಹಣಕಾಸಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳಿಗೆ ಬಂಧಿತ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಐಷಾರಾಮಿ ಬಂಗಲೆ ಕಂಡು ದಂಗಾಗಿ ಹೋಗಿದ್ದಾರೆ.

ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಕಳೆದ ತಿಂಗಳು ಟ್ರೈನಿ ವೈದ್ಯೆಯ ಮೇಲೆ ರೇಪ್ ಆಂಡ್ ಮರ್ಡರ್ ನಡೆದಿತ್ತು. ಈ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐಗೆ ಮೆಡಿಕಲ್ ಕಾಲೇಜಿನಲ್ಲಿ ನಡೆಯುತ್ತಿದ್ದ ಹಣಕಾಸಿನ ಅವ್ಯವಹಾರಗಳು ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ಸಂದೀಪ್ ಘೋಷ್ ರನ್ನು ಬಂಧಿಸಿದ್ದಲ್ಲದೆ, ಹಣಕಾಸಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಇಡಿ ಇಲಾಖೆಗೆ ಸೂಚಿಸಿತ್ತು.

ಅದರಂತೆ ಇಡಿ ಅಧಿಕಾರಿಗಳು ಸಂದೀಪ್ ಘೋಷ್ ಮನೆ ಮೇಲೆ ದಾಳಿ ನಡೆಸಿ ಅವರ ಮೂವರು ಸಹಾಯಕರನ್ನುಬಂಧಿಸಿದೆ. ಮಧ್ಯನಾರಾಯಣಪುರ್ ನಲ್ಲಿರುವ ಸಂದೀಪ್ ಘೋಷ್ ಫಾರ್ಮ್ ಹೌಸ್ ಕಮ್ ಬಂಗಲೆ ನೋಡಿ ಇಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬಹುಮಹಡಿಯ ಬಂಗಲೆ ಮತ್ತು ಫಾರ್ಮ್ ಹೌಸ್ ಅಲ್ಲಿದೆ. ಇಲ್ಲಿಗೆ ಸಂದೀಪ್ ತನ್ನ ಕುಟುಂಬದ ಜೊತೆ ಆಗಾಗ ಭೇಟಿ ನೀಡುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಸಂದೀಪ್ ಘೋಷ್ ನಡೆಸಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ವಿವಿಧ ಕಡೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಣಕಾಸಿನ ಅವ್ಯವಹಾರವೇ ವೈದ್ಯೆ ಹತ್ಯೆಗೂ ಕಾರಣ ಎಂದು ಕೆಲವರು ಆರೋಪಿಸಿದ್ದರು. ಹೀಗಾಗಿ ಸಿಬಿಐ ಈ ನಿಟ್ಟಿನಲ್ಲೂ ತನಿಖೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments