Webdunia - Bharat's app for daily news and videos

Install App

ಆರ್ ಜಿ ಕರ್ ಆಸ್ಪತ್ರೆಯ ಸಂದೀಪ್ ಘೋಷ್ ಐಷಾರಾಮಿ ಬಂಗಲೆ ನೋಡಿ ದಂಗಾದ ಇಡಿ ಅಧಿಕಾರಿಗಳು

Krishnaveni K
ಶನಿವಾರ, 7 ಸೆಪ್ಟಂಬರ್ 2024 (09:18 IST)
ಕೋಲ್ಕತ್ತಾ: ಟ್ರೈನಿ ವೈದ್ಯೆ ಹತ್ಯೆ ಬಳಿಕ ಬೆಳಕಿಗೆ ಬಂದ ಆರ್ ಜಿ ಕರ್ ಆಸ್ಪತ್ರೆಯ ಹಣಕಾಸಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳಿಗೆ ಬಂಧಿತ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಐಷಾರಾಮಿ ಬಂಗಲೆ ಕಂಡು ದಂಗಾಗಿ ಹೋಗಿದ್ದಾರೆ.

ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಕಳೆದ ತಿಂಗಳು ಟ್ರೈನಿ ವೈದ್ಯೆಯ ಮೇಲೆ ರೇಪ್ ಆಂಡ್ ಮರ್ಡರ್ ನಡೆದಿತ್ತು. ಈ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐಗೆ ಮೆಡಿಕಲ್ ಕಾಲೇಜಿನಲ್ಲಿ ನಡೆಯುತ್ತಿದ್ದ ಹಣಕಾಸಿನ ಅವ್ಯವಹಾರಗಳು ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ಸಂದೀಪ್ ಘೋಷ್ ರನ್ನು ಬಂಧಿಸಿದ್ದಲ್ಲದೆ, ಹಣಕಾಸಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಇಡಿ ಇಲಾಖೆಗೆ ಸೂಚಿಸಿತ್ತು.

ಅದರಂತೆ ಇಡಿ ಅಧಿಕಾರಿಗಳು ಸಂದೀಪ್ ಘೋಷ್ ಮನೆ ಮೇಲೆ ದಾಳಿ ನಡೆಸಿ ಅವರ ಮೂವರು ಸಹಾಯಕರನ್ನುಬಂಧಿಸಿದೆ. ಮಧ್ಯನಾರಾಯಣಪುರ್ ನಲ್ಲಿರುವ ಸಂದೀಪ್ ಘೋಷ್ ಫಾರ್ಮ್ ಹೌಸ್ ಕಮ್ ಬಂಗಲೆ ನೋಡಿ ಇಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬಹುಮಹಡಿಯ ಬಂಗಲೆ ಮತ್ತು ಫಾರ್ಮ್ ಹೌಸ್ ಅಲ್ಲಿದೆ. ಇಲ್ಲಿಗೆ ಸಂದೀಪ್ ತನ್ನ ಕುಟುಂಬದ ಜೊತೆ ಆಗಾಗ ಭೇಟಿ ನೀಡುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಸಂದೀಪ್ ಘೋಷ್ ನಡೆಸಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ವಿವಿಧ ಕಡೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಣಕಾಸಿನ ಅವ್ಯವಹಾರವೇ ವೈದ್ಯೆ ಹತ್ಯೆಗೂ ಕಾರಣ ಎಂದು ಕೆಲವರು ಆರೋಪಿಸಿದ್ದರು. ಹೀಗಾಗಿ ಸಿಬಿಐ ಈ ನಿಟ್ಟಿನಲ್ಲೂ ತನಿಖೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments