Webdunia - Bharat's app for daily news and videos

Install App

ಬಾಲಕನ ಎಡಗಣ್ಣಿನ ಸಮಸ್ಯೆಗೆ ಬಲಗಣ್ಣಿಗೆ ಶಸ್ತ್ರಚಿಕಿತ್ಸೆ: ನೋಯ್ಡಾದ ವೈದ್ಯರ ಎಡವಟ್ಟಿಗೆ ಆಕ್ರೋಶ

Sampriya
ಗುರುವಾರ, 14 ನವೆಂಬರ್ 2024 (15:05 IST)
Photo Courtesy X
ಲಖನೌ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದಕ್ಕೆ ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಹೋದ 7 ವರ್ಷದ ಬಾಲಕನಿಗೆ ಅಲ್ಲಿನ ವೈದ್ಯರು ಬಲಗಣ್ಣಿನ ಶಸ್ತ್ರಚಿಕಿತ್ಸೆ ಮಾಡಿದ ಘಟನೆ ನಡೆದಿದೆ.

ನ.12 ರಂದು ಸೆಕ್ಟರ್ ಗಾಮಾ 1ರ ಆನಂದ್ ಸ್ಪೆಕ್ಟ್ರಮ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಬಾಲಕನ ಎಡಗಣ್ಣಿನಿಂದ ಆಗಾಗ ನೀರು ಬರುತ್ತಿತ್ತು. ಇದಕ್ಕಾಗಿ ಬಾಲಕನ ತಂದೆ ನಿತಿನ್ ಭಾಟಿ ಆತನನ್ನು ಆಸ್ಪತ್ರೆಗೆ ತೋರಿಸಿದ್ದರು. ವೈದ್ಯರು ತಪಾಸಣೆ ನಡೆಸಿದ ನಂತರ, ಬಾಲಕನ ಕಣ್ಣಿನಲ್ಲಿ ಪ್ಲಾಸ್ಟಿಕ್ ತರಹದ ವಸ್ತುವಿದೆ. ಅದನ್ನು ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದ್ದರು.

ಆಸ್ಪತ್ರೆಗೆ ₹ 45,000 ಹಣ ಪಾವತಿಸಿ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಬಳಿಕ ಬಾಲಕನನ್ನು ಮನೆಗೆ ಕರೆದುಕೊಂಡು ಬಂದ ಮೇಲೆ ಆತನ ತಾಯಿ ಬಲಗಣ್ಣಿನ ಶಸ್ತ್ರಚಿಕಿತ್ಸೆ ಮಾಡಿರುವುದನ್ನು ಗಮನಿಸಿದ್ದಾರೆ. ಮತ್ತೆ ವೈದ್ಯರನ್ನು ಸಂಪರ್ಕಿಸಿ ವಿಚಾರಿಸಿದಾಗ, ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸಂಬಂಧ ಬಾಲಕನ ತಂದೆ, ಗೌತಮ್ ಬುದ್ಧ ನಗರದ ಮುಖ್ಯ ವೈದ್ಯಕೀಯ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ವೈದ್ಯರ ಪರವಾನಿಗೆಯನ್ನು ರದ್ದುಪಡಿಸಿ, ಆಸ್ಪತ್ರೆಯನ್ನು ಬಂದ್‌ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments