Webdunia - Bharat's app for daily news and videos

Install App

ಕಾವೇರಿ ನದಿ ವಿವಾದ ಪರಿಹಾರ ಇನ್ನು ಸುಲಭ

Webdunia
ಬುಧವಾರ, 15 ಮಾರ್ಚ್ 2017 (09:15 IST)
ನವದೆಹಲಿ: ದೇಶದ ನದಿ ವ್ಯಾಜ್ಯಗಳನ್ನು ಸುಲಭವಾಗಿ ಪರಿಹರಿಸಲು ಕೇಂದ್ರ ಸರ್ಕಾರ ಹೊಸ ನ್ಯಾಯಾಧಿಕರಣ ವ್ಯವಸ್ಥೆಯೊಂದನ್ನು ನಿರ್ಮಿಸಲು ಹೊಸ ಮಸೂದೆ ಮಂಡಿಸಿದೆ. ಇದರಿಂದ ಕಾವೇರಿ, ಕೃಷ್ಣ ಮಹದಾಯಿ ಸೇರಿದಂತೆ ಹಲವು ನದಿ ವಿವಾದಗಳಿಗೆ ಬೇಗನೇ ಪರಿಹಾರ ಸಿಗಲಿದೆ.

 
ಅಂತರಾಜ್ಯ ನೀರು ಹಂಚಿಕೆ ವಿವಾದ ಬಗೆಹರಿಸಲು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಸಂಸತ್ತಿನಲ್ಲಿ ಹೊಸ ಮಸೂದೆಯೊಂದನ್ನು ಮಂಡಿಸಿದ್ದಾರೆ. ಅದರಂತೆ ಇನ್ನು ಇಡೀ ದೇಶಕ್ಕೆ ಒಂದೇ ನ್ಯಾಯಾಧಿಕರಣ ಅಸ್ಥಿತ್ವಕ್ಕೆ ಬರಲಿದೆ.

ಎಲ್ಲಾ ನದಿ ವಿವಾದಗಳೂ ಒಂದೇ ನ್ಯಾಯಾಧಿಕರಣದಲ್ಲಿ ತೀರ್ಮಾನಗೊಳ್ಳಲಿದೆ. ಅಲ್ಲದೆ, ನ್ಯಾಯಾಧಿಕರಣ ಯಾವುದೇ ನದಿ ವಿವಾದವನ್ನು ನಾಲ್ಕುವರೆ ವರ್ಷಕ್ಕಿಂತ ಹೆಚ್ಚು ಸಮಯ ಇತ್ಯರ್ಥಗೊಳಿಸದೇ ಇರುವಂತಿಲ್ಲ.

ನ್ಯಾಯಾಧಿಕರಣ ನೀಡುವ ತೀರ್ಪನ್ನು ಎರಡೂ ರಾಜ್ಯಗಳು ಪಾಲಿಸಬೇಕು. ಈ ನ್ಯಾಯಾಧಿಕರಣದಲ್ಲಿ ತಜ್ಞ ಇಂಜಿನಿಯರ್ ಗಳಿರುತ್ತಾರೆ. ನ್ಯಾಯಾಧಿಕರಣದ ಮುಖ್ಯಸ್ಥರ ಅಧಿಕಾರಾವಧಿ ಐದು ವರ್ಷವಾಗಿರುತ್ತದೆ. 70 ವರ್ಷಕ್ಕಿಂತ ಮೇಲ್ಪಟ್ಟವರು ನ್ಯಾಯಾಧಿಕರಣದಲ್ಲಿರುವಂತಿಲ್ಲ ಎಂದು ಮಸೂದೆಯಲ್ಲಿ ಹೇಳಲಾಗಿದೆ.  ಆದರೆ ವಿಪಕ್ಷಗಳು ರಾಜ್ಯಗಳ ಅಭಿಪ್ರಾಯ ಕೇಳದೇ ಇಂತಹದ್ದೊಂದು ನ್ಯಾಯಾಧಿಕರಣ ಸ್ಥಾಪಿಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments