ಲಾಲೂ ಪುತ್ರ ಡೈವೋರ್ಸ್ ಪ್ರಹಸನದಿಂದ ಲೋಕಸಭೆ ಚುನಾವಣೆ ಸೀಟು ಹಂಚಿಕೆ ಅಯೋಮಯ!

Webdunia
ಸೋಮವಾರ, 12 ನವೆಂಬರ್ 2018 (09:52 IST)
ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ವಿಚ್ಛೇದನ ಪ್ರಕರಣ ಇದೀಗ ಲೋಕಸಭೆ ಚುನಾವಣೆ ಮೈತ್ರಿ ಮೇಲೆ ಪರಿಣಾಮ ಬೀರಿದೆ. ಹೇಗಂತೀರಾ?

ಲಾಲೂ ಯಾದವ್ ಪುತ್ರನ ವಿಚ್ಛೇದನ ವಿಚಾರ ಇದೀಗ ಆರ್ ಜೆಡಿ ಮುಖ್ಯಸ್ಥರ ಕುಟುಂಬಕ್ಕೆ ದೊಡ್ಡ ತಲೆನೋವಾಗಿದೆ. ವಿಚ್ಛೇದನಕ್ಕೆ ಕುಟುಂಬ ಸದಸ್ಯರಲ್ಲಿ ಸಹಮತವಿಲ್ಲ. ಕುಟುಂಬ ಸದಸ್ಯರು ತನ್ನ ನಿರ್ಧಾರ ಬೆಂಬಲಿಸದಿದ್ದರೆ ಮನೆಗೆ ಮರಳುವುದಿಲ್ಲ ಎಂದು ತೇಜ್  ಪ್ರತಾಪ್ ರಚ್ಚೆ ಹಿಡಿದು ಕೂತಿದ್ದಾರೆ.

ಈ ಎಲ್ಲಾ ತಲೆನೋವುಗಳ ಮಧ್ಯೆ ಆರ್ ಜೆಡಿ ಮುಖ್ಯಸ್ಥ ಲಾಲೂ ಯಾದವ್ ಮತ್ತು ಪುತ್ರರು ಲೋಕಸಭೆ ಚುನಾವಣೆಗೆ ಮೈತ್ರಿ ಪಕ್ಷಗಳ ಜತೆ ಸೀಟು ಹಂಚಿಕೆ ವಿಚಾರ ಮಾತುಕತೆ ಮುಂದುವರಿಸಲು ಆಸಕ್ತಿ ತೋರುತ್ತಿಲ್ಲ. ಬಿಹಾರದಲ್ಲಿ ಹಿಂದೂಸ್ತಾನ್ ಅವಮ್ ಮೋರ್ಚಾ ಪಕ್ಷದೊಂದಿಗೆ ಆರ್ ಜೆಡಿ ಸೀಟು ಹಂಚಿಕೆ ವಿಚಾರವಾಗಿ ಈಗಾಗಲೇ ನಿರ್ಧಾರಕ್ಕೆ ಬರಬೇಕಿತ್ತು. ಆದರೆ ತೇಜ್ ಪ್ರತಾಪ್ ಪ್ರಕರಣದಿಂದಾಗಿ ಆರ್ ಜೆಡಿ ಮೊದಲ ಕುಟುಂಬ ಈ ಬಗ್ಗೆ ಮಾತುಕತೆಯೇ ನಡೆಸುತ್ತಿಲ್ಲ ಎನ್ನಲಾಗಿದೆ. ಲಾಲೂ ಯಾದವ್ ಕುಟುಂಬ ಸಮಸ್ಯೆಯಿಂದಾಗಿ ರಾಜಕಾರಣದಲ್ಲೂ ಪರಿಣಾಮ ಬೀರಿದೆ ಎನ್ನಲಾಗಿದೆ. ಇದು ಎಲ್ಲಿಯವರೆಗೆ ಹೋಗಿ ಮುಟ್ಟುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮೆಗಾ ಸಿಟಿ ಪ್ರಾಜೆಕ್ಟ್, ಕೈ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್‌

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments