Webdunia - Bharat's app for daily news and videos

Install App

ಲಾಲೂ ಪುತ್ರ ಡೈವೋರ್ಸ್ ಪ್ರಹಸನದಿಂದ ಲೋಕಸಭೆ ಚುನಾವಣೆ ಸೀಟು ಹಂಚಿಕೆ ಅಯೋಮಯ!

Webdunia
ಸೋಮವಾರ, 12 ನವೆಂಬರ್ 2018 (09:52 IST)
ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ವಿಚ್ಛೇದನ ಪ್ರಕರಣ ಇದೀಗ ಲೋಕಸಭೆ ಚುನಾವಣೆ ಮೈತ್ರಿ ಮೇಲೆ ಪರಿಣಾಮ ಬೀರಿದೆ. ಹೇಗಂತೀರಾ?

ಲಾಲೂ ಯಾದವ್ ಪುತ್ರನ ವಿಚ್ಛೇದನ ವಿಚಾರ ಇದೀಗ ಆರ್ ಜೆಡಿ ಮುಖ್ಯಸ್ಥರ ಕುಟುಂಬಕ್ಕೆ ದೊಡ್ಡ ತಲೆನೋವಾಗಿದೆ. ವಿಚ್ಛೇದನಕ್ಕೆ ಕುಟುಂಬ ಸದಸ್ಯರಲ್ಲಿ ಸಹಮತವಿಲ್ಲ. ಕುಟುಂಬ ಸದಸ್ಯರು ತನ್ನ ನಿರ್ಧಾರ ಬೆಂಬಲಿಸದಿದ್ದರೆ ಮನೆಗೆ ಮರಳುವುದಿಲ್ಲ ಎಂದು ತೇಜ್  ಪ್ರತಾಪ್ ರಚ್ಚೆ ಹಿಡಿದು ಕೂತಿದ್ದಾರೆ.

ಈ ಎಲ್ಲಾ ತಲೆನೋವುಗಳ ಮಧ್ಯೆ ಆರ್ ಜೆಡಿ ಮುಖ್ಯಸ್ಥ ಲಾಲೂ ಯಾದವ್ ಮತ್ತು ಪುತ್ರರು ಲೋಕಸಭೆ ಚುನಾವಣೆಗೆ ಮೈತ್ರಿ ಪಕ್ಷಗಳ ಜತೆ ಸೀಟು ಹಂಚಿಕೆ ವಿಚಾರ ಮಾತುಕತೆ ಮುಂದುವರಿಸಲು ಆಸಕ್ತಿ ತೋರುತ್ತಿಲ್ಲ. ಬಿಹಾರದಲ್ಲಿ ಹಿಂದೂಸ್ತಾನ್ ಅವಮ್ ಮೋರ್ಚಾ ಪಕ್ಷದೊಂದಿಗೆ ಆರ್ ಜೆಡಿ ಸೀಟು ಹಂಚಿಕೆ ವಿಚಾರವಾಗಿ ಈಗಾಗಲೇ ನಿರ್ಧಾರಕ್ಕೆ ಬರಬೇಕಿತ್ತು. ಆದರೆ ತೇಜ್ ಪ್ರತಾಪ್ ಪ್ರಕರಣದಿಂದಾಗಿ ಆರ್ ಜೆಡಿ ಮೊದಲ ಕುಟುಂಬ ಈ ಬಗ್ಗೆ ಮಾತುಕತೆಯೇ ನಡೆಸುತ್ತಿಲ್ಲ ಎನ್ನಲಾಗಿದೆ. ಲಾಲೂ ಯಾದವ್ ಕುಟುಂಬ ಸಮಸ್ಯೆಯಿಂದಾಗಿ ರಾಜಕಾರಣದಲ್ಲೂ ಪರಿಣಾಮ ಬೀರಿದೆ ಎನ್ನಲಾಗಿದೆ. ಇದು ಎಲ್ಲಿಯವರೆಗೆ ಹೋಗಿ ಮುಟ್ಟುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments