Webdunia - Bharat's app for daily news and videos

Install App

ಆರ್‌ಜೆಡಿಯಿಂದ ಜೇಠ್ಮಲಾನಿ, ರಾಬ್ಡಿದೇವಿಗೆ ರಾಜ್ಯಸಭೆ ಟಿಕೆಟ್

Webdunia
ಬುಧವಾರ, 25 ಮೇ 2016 (18:57 IST)
ಬಿಜೆಪಿಯಿಂದ ಉಚ್ಚಾಟನೆಗೊಂಡ ಖ್ಯಾತ ಹಿರಿಯ ವಕೀಲ ರಾಮ್ ಜೇಠ್ಮಲಾನಿಯವರನ್ನು ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್‌ಜೆಡಿ ರಾಜ್ಯಸಭೆಗೆ ನೇಮಕ ಮಾಡಿ ಅಚ್ಚರಿ ಮೂಡಿಸಿದೆ. 
 
ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿಯವರನ್ನು ಕೂಡಾ ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ ಎಂದು ಆರ್‌ಜೆಡಿ ವಕ್ತಾರರು ತಿಳಿಸಿದ್ದಾರೆ.
 
ಸಂಸತ್ತಿನಲ್ಲಿ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆಕ್ರಮಣಕಾರಿಯಾಗಿ ಪ್ರತಿನಿಧಿಸುತ್ತಿರುವುದರಿಂದ ಅವರಿಗೆ ಸರಿ ಸಮಾನವಾದ ಸವಾಲ್‌ ನೀಡಲು ಜೇಠ್ಮಲಾನಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಏಳು ವಿಧಾನ ಪರಿಷತ್ ಸ್ಥಾನಗಳು ಮತ್ತು ಐದು ರಾಜ್ಯಸಭೆ ಸ್ಥಾನಗಳಿಗಾಗಿ ಜೂನ್ 10 ಮತ್ತು 11 ರಂದು ಚುನಾವಣೆ ನಡೆಯಲಿದೆ. 
 
243 ಸೀಟುಗಳ ಬಲದ ವಿಧಾನ ಸಭೆಯಲ್ಲಿ ಆರ್‌ಜೆಡಿ 80 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಎರಡು ರಾಜ್ಯಸಭೆ ಮತ್ತು ಎರಡು ವಿಧಾನ ಪರಿಷತ್ ಸೀಟುಗಳನ್ನು ಸುಲಭವಾಗಿ ಗೆಲ್ಲಲಿದೆ. 
 
ಮತ್ತೊಂದು ವರದಿಗಳ ಪ್ರಕಾರ, ಜೇಠ್ಮಲಾನಿ ಲಾಲು ಯಾದವ್‌ರ ಮೇವು ಹಗರಣ ಪ್ರಕರಣಗಳ ಬಗ್ಗೆ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿರುವುದರಿಂದ, ರಾಜ್ಯಸಭೆಯ ಸೀಟಿನ ಕೊಡುಗೆ ನೀಡಿರಬಹುದು ಎನ್ನಲಾಗುತ್ತಿದೆ.   

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments