Webdunia - Bharat's app for daily news and videos

Install App

ಆರ್‌ಜೆಡಿಯಿಂದ ಜೇಠ್ಮಲಾನಿ, ರಾಬ್ಡಿದೇವಿಗೆ ರಾಜ್ಯಸಭೆ ಟಿಕೆಟ್

Webdunia
ಬುಧವಾರ, 25 ಮೇ 2016 (18:57 IST)
ಬಿಜೆಪಿಯಿಂದ ಉಚ್ಚಾಟನೆಗೊಂಡ ಖ್ಯಾತ ಹಿರಿಯ ವಕೀಲ ರಾಮ್ ಜೇಠ್ಮಲಾನಿಯವರನ್ನು ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್‌ಜೆಡಿ ರಾಜ್ಯಸಭೆಗೆ ನೇಮಕ ಮಾಡಿ ಅಚ್ಚರಿ ಮೂಡಿಸಿದೆ. 
 
ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿಯವರನ್ನು ಕೂಡಾ ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ ಎಂದು ಆರ್‌ಜೆಡಿ ವಕ್ತಾರರು ತಿಳಿಸಿದ್ದಾರೆ.
 
ಸಂಸತ್ತಿನಲ್ಲಿ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆಕ್ರಮಣಕಾರಿಯಾಗಿ ಪ್ರತಿನಿಧಿಸುತ್ತಿರುವುದರಿಂದ ಅವರಿಗೆ ಸರಿ ಸಮಾನವಾದ ಸವಾಲ್‌ ನೀಡಲು ಜೇಠ್ಮಲಾನಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಏಳು ವಿಧಾನ ಪರಿಷತ್ ಸ್ಥಾನಗಳು ಮತ್ತು ಐದು ರಾಜ್ಯಸಭೆ ಸ್ಥಾನಗಳಿಗಾಗಿ ಜೂನ್ 10 ಮತ್ತು 11 ರಂದು ಚುನಾವಣೆ ನಡೆಯಲಿದೆ. 
 
243 ಸೀಟುಗಳ ಬಲದ ವಿಧಾನ ಸಭೆಯಲ್ಲಿ ಆರ್‌ಜೆಡಿ 80 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಎರಡು ರಾಜ್ಯಸಭೆ ಮತ್ತು ಎರಡು ವಿಧಾನ ಪರಿಷತ್ ಸೀಟುಗಳನ್ನು ಸುಲಭವಾಗಿ ಗೆಲ್ಲಲಿದೆ. 
 
ಮತ್ತೊಂದು ವರದಿಗಳ ಪ್ರಕಾರ, ಜೇಠ್ಮಲಾನಿ ಲಾಲು ಯಾದವ್‌ರ ಮೇವು ಹಗರಣ ಪ್ರಕರಣಗಳ ಬಗ್ಗೆ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿರುವುದರಿಂದ, ರಾಜ್ಯಸಭೆಯ ಸೀಟಿನ ಕೊಡುಗೆ ನೀಡಿರಬಹುದು ಎನ್ನಲಾಗುತ್ತಿದೆ.   

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments