Webdunia - Bharat's app for daily news and videos

Install App

1ಕೆಜಿ ಬೆಳ್ಳಿಯ ಆಭರಣಕ್ಕಾಗಿ ಪಾದವನ್ನೇ ಕತ್ತರಿಸಿದ ದರೋಡೆಕೋರರು

Webdunia
ಮಂಗಳವಾರ, 5 ಮೇ 2015 (17:18 IST)
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ದರೋಡೆಕೋರರು ಹಿರಿಯ ವಯಸ್ಸಿನ ಮಹಿಳೆಯನ್ನು ಹತ್ಯೆ ಮಾಡಿ 1 ಕೆಜಿ ಬೆಳ್ಳಿಯ ಆಭರಣಗಳನ್ನು ಕದ್ದು ಪರಾರಿಯಾದ ಘಟನೆ ಜಿಲ್ಲೆಯ ಸಾಕೋದರಾ ಗ್ರಾಮದಲ್ಲಿ ನಡೆದಿದೆ.

ದರೋಡೆಕೋರರು ಹೇಯ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.

ಗ್ರಾಮದ ನಿವಾಸಿಯಾದ ಉದಿಬಾಯಿ ಎನ್ನುವ ಮಹಿಳೆ ಮಧ್ಯಾಹ್ನದವರೆಗೂ ಮನೆಯಿಂದ ಹೊರಗೆ ಬಾರದಿದ್ದಾಗ ಅನುಮಾನಗೊಂಡ ನೆರೆಹೊರೆಯವರು ಆಕೆಯ ಕುಶಲೋಪರಿ ವಿಚಾರಿಸಲು ಆಕೆಯ ಮನೆಯನ್ನು ಪ್ರವೇಶಿಸಿದಾಗ ಅಲ್ಲಿದ್ದ ದೃಶ್ಯ ಕಂಡು ದಂಗುಬಡಿದಂತಾಗಿದ್ದಾರೆ.

ಮಹಿಳೆ ಉದಿಬಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಆಕೆಯ ತುಂಡರಿಸಿದ ಮೃತ ದೇಹ ಕಂಡು ಆಘಾತಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾಲಲ್ಲಿದ್ದ ಬೆಳ್ಳಿಯ ಆಭರಣವನ್ನು ತೆಗೆದುಕೊಂಡ ಹೋಗಲು ದರೋಡೆಕೋರರು ಆಕೆಯ ಪಾದವನ್ನೇ ಕತ್ತರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಲಾಂಬಾ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments