ರಾಬರ್ಟ್ ವಾದ್ರಾ ವಿರುದ್ಧ ಇಡಿ ಚಾರ್ಜ್ ಶೀಟ್: ಮುಗಿಬಿದ್ದ ಕಾಂಗ್ರೆಸ್ ನಾಯಕರು

Krishnaveni K
ಶುಕ್ರವಾರ, 18 ಜುಲೈ 2025 (10:05 IST)
Photo Credit: X
ನವದೆಹಲಿ: ಸೋನಿಯಾ ಗಾಂಧಿ ಅಳಿಯ, ಪ್ರಿಯಾಂಕ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕುತ್ತಿದ್ದಂತೇ ಕಾಂಗ್ರೆಸ್ ನಾಯಕರು ಕೇಂದ್ರದ ಮೇಲೆ ಮುಗಿಬಿದ್ದಿದ್ದಾರೆ.

ಹರ್ಯಾಣದ ಶಿಕೋಹ್ ಪುರದಲ್ಲಿನ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ವಿರುದ್ಧ ಅಕ್ರಮ ಹಣವರ್ಗಾವಣೆ ಮಾಡಿದ ಆರೋಪವಿದೆ. ಈ ಸಂಬಂಧ ಇಡಿ ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಈಗಾಗಲೇ 36 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.

ಇದೀಗ ರಾಬರ್ಡ್ ವಾದ್ರಾ ವಿರುದ್ಧ ಆರೋಪಪಟ್ಟಿ ಸಲ್ಲಿಸುತ್ತಿದ್ದಂತೇ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದೆಲ್ಲಾ ಮೋದಿ ಪಿತೂರಿ. ಬೇಕೆಂದೇ ಕಾಂಗ್ರೆಸ್ ನಾಯಕರನ್ನು ಅವರ ಆಪ್ತರನ್ನು ಟಾರ್ಗೆಟ್ ಮಾಡುತ್ತಿದೆ. ಬಹುಶಃ ಇಡಿ ಅಧಿಕಾರಿಗಳಿಗೆ ಮೋದಿ-ಶಾ ಜೋಡಿ ತಿಂಗಳಿಗೆ ಇಷ್ಟು ಕಾಂಗ್ರೆಸ್ ನಾಯಕರ ಮೇಲೆ ದಾಳಿ ಮಾಡಬೇಕು ಎಂದು ಟಾರ್ಗೆಟ್ ನೀಡಿರಬೇಕು ಎಂದು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ದಮನಿಸುವ ಮೋದಿ ಸರ್ಕಾರದ ಮೋಸದ ಬಲೆ ಎಂದಿಗೂ ಯಶಸ್ವಿಯಾಗಲ್ಲ. ಹರ್ಯಾಣದಲ್ಲಿ ಭೂಮಿ ಖರೀದಿ ವಿಚಾರದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ಮುಂದಿನ ಸುದ್ದಿ
Show comments