Webdunia - Bharat's app for daily news and videos

Install App

ಪತ್ನಿ ಪ್ರಿಯಾಂಕಾ ಗಾಂಧಿ ಸಂಸದೆಯಾದ ಬೆನ್ನಲ್ಲೇ ರಾಜಕೀಯ ಎಂಟ್ರಿ ಬಗ್ಗೆ ಸುಳಿವು ಕೊಟ್ಟ ರಾಬರ್ಟ್ ವಾದ್ರಾ

Sampriya
ಸೋಮವಾರ, 14 ಏಪ್ರಿಲ್ 2025 (15:45 IST)
Photo Credit X
ನವದೆಹಲಿ: ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಸುಳಿವು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ನನ್ನ ರಾಜಕೀಯ ಪ್ರವೇಶ ಬಗ್ಗೆ ಆಸಕ್ತಿ ತೋರಿಸಿದರೆ, ಕುಟುಂಬದವರ ಆಶೀರ್ವಾದವಿದ್ದರೆ ನಾನು ಮುಂದಿನ ಹೆಜ್ಜೆಯನ್ನು ಇಡುತ್ತೇನೆ ಎಂದು ಹೇಳಿದ್ದಾರೆ.

ಸೋಮವಾರ ಎಎನ್‌ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ರಾಬರ್ಟ್ ವಾದ್ರಾ ಅವರು, ಇನ್ನೂ ನನಗೆ ರಾಜಕೀಯದಲ್ಲಿ ಆಸಕ್ತಿ ಮೂಡಲು ಗಾಂಧಿ ಕುಟುಂಬದೊಂದಿಗಿನ ನಂಟು  ಎಂದರು. ಅನೇಕ ರಾಜಕೀಯ ಪಕ್ಷಗಳು ಅವರನ್ನು ರಾಜಕೀಯ ಚರ್ಚೆಗಳಿಗೆ ಎಳೆಯಲು ಪ್ರಯತ್ನಿಸಿದವು, ಆಗಾಗ್ಗೆ ಅವರ ಹೆಸರನ್ನು ಚುನಾವಣೆಗಳು ಅಥವಾ ಇತರ ವಿಷಯಗಳ ಸಮಯದಲ್ಲಿ ವ್ಯಾಕುಲತೆಯಾಗಿ ಬಳಸಿಕೊಂಡಿವೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿನಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದನ್ನು ನೋಡಿದ್ದೇನೆ. ಇವರ ಮೂಲಕ ಅನೇಕ ವಿಚಾರಗಳನ್ನು ಕಲಿತುಕೊಂಡಿದ್ದೇನೆ ಎಂದರು.

ನಾನು ಈ ಹಿಂದಿನಿಂದಲೂ ಪ್ರಿಯಾಂಕಾಳನ್ನು ಸಂಸತ್ತಿನಲ್ಲಿ ನೋಡಬೇಕೆಂದು ಬಯಸಿದ್ದೆ. ಇದೀಗ ಆಕೆ ತುಂಬಾನೇ ಕಷ್ಟ ಪಡುತ್ತಿದ್ದಾಳೆ.

ಕಾಂಗ್ರೆಸ್ ಪಕ್ಷವು ತಾನು ರಾಜಕೀಯಕ್ಕೆ ಸೇರಬೇಕೆಂದು ನಿರ್ಧರಿಸಿದರೆ, ವಿಭಜಕ ಶಕ್ತಿಗಳ ವಿರುದ್ಧ ಹೋರಾಡಲು ಮತ್ತು ದೇಶವನ್ನು ಜಾತ್ಯತೀತವಾಗಿಡಲು ಸಂಸತ್ತಿನಲ್ಲಿ ಹೆಚ್ಚಿನ ಧ್ವನಿಯ ಅಗತ್ಯವನ್ನು ಅರ್ಥಮಾಡಿಕೊಂಡು ನಾನು ಮುಂದಿನ ಹೆಜ್ಜೆಯಿಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments