Webdunia - Bharat's app for daily news and videos

Install App

ಮುಂದೊಂದು ದಿನ ನಾನೂ ಪಾರ್ಲಿಮೆಂಟ್ ನಲ್ಲಿರುತ್ತೇನೆ ಎಂದ ಪ್ರಿಯಾಂಕ ಪತಿ ರಾಬರ್ಟ್ ವಾದ್ರಾ

Krishnaveni K
ಮಂಗಳವಾರ, 18 ಜೂನ್ 2024 (14:57 IST)
ನವದೆಹಲಿ: ವಯನಾಡಿನಲ್ಲಿ ರಾಹುಲ್ ಗಾಂಧಿಯಿಂದ ತೆರವಾಗುತ್ತಿರುವ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಪ್ರಿಯಾಂಕ ವಾದ್ರಾ ಸ್ಪರ್ಧಿಸಲು ತೀರ್ಮಾನಿಸಿದ ಬೆನ್ನಲ್ಲೇ ಅವರ ಪತಿ ರಾಬರ್ಟ್ ವಾದ್ರಾ ಪ್ರತಿಕ್ರಿಯಿಸಿದ್ದಾರೆ.

ಪ್ರಿಯಾಂಕ ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅದೂ ತಮ್ಮನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಅಕ್ಕನ ಸ್ಪರ್ಧೆ ನಡೆಯಲಿದೆ. ಈ ನಡುವೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಪತಿ ರಾಬರ್ಟ್ ವಾದ್ರಾ ನಾನೂ ಮುಂದೊಂದು ದಿನ ಪತ್ನಿಯ ಹಿಂದೆಯೇ ಪಾರ್ಲಿಮೆಂಟ್ ಪ್ರವೇಶಿಸಬಹುದು ಎಂದಿದ್ದಾರೆ.

‘ಮೊದಲನೆಯದಾಗಿ ಬಿಜೆಪಿಯ ಜಾತಿ ಆಧಾರಿತ ಚುನಾವಣಾ ತಂತ್ರಕ್ಕೆ ಪಾಠ ಕಲಿಸಿದ ಭಾರತೀಯ ಜನರಿಗೆ ನಾನು ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಪ್ರಿಯಾಂಕ ಸಂಸತ್ ಚುನಾವಣೆಗೆ ಸ್ಪರ್ಧಿಸುವುದು ನನಗೆ ಖುಷಿಯಾಗಿದೆ. ಆಕೆ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾಳೆ ಎಂಬ ಕಾರಣಕ್ಕೆ ಅಲ್ಲ, ಆಕೆ ಸಂಸತ್ತಿನಲ್ಲಿರಬೇಕು ಎಂದು ನಾನು ಬಯಸುತ್ತೇನೆ’ ಎಂದಿದ್ದಾರೆ.

ಅಲ್ಲದೆ ತಾವೂ ಮುಂದೊಂದು ದಿನ  ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ‘ನನಗಿಂತ ಮೊದಲು ಪ್ರಿಯಾಂಕ ಸಂಸತ್ ಗೆ ಪ್ರವೇಶಿಸಬೇಕು. ನಾನು ಮುಂದೊಂದು ದಿನ ಆಕೆಯನ್ನು ಹಿಂಬಾಲಿಸುತ್ತೇನೆ. ಜನ ಆಕೆಗೆ ಆಶೀರ್ವದಿಸುತ್ತಾರೆ ಎಂಬ ನಂಬಿಕೆಯಿದೆ’ ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments