Webdunia - Bharat's app for daily news and videos

Install App

ರಾಕೆಟ್ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ

Webdunia
ಬುಧವಾರ, 5 ಏಪ್ರಿಲ್ 2023 (11:03 IST)
ನವದೆಹಲಿ : ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಮರಳಿ ಭೂಮಿಗೆ ಲ್ಯಾಂಡ್ ಆಗುವ ರಾಕೆಟ್ ಅಭಿವೃದ್ಧಿ ಪಡಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಹತ್ವದ ಸಾಧನೆ ಮಾಡಿದೆ.

ಭಾನುವಾರ ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಲ್ಯಾಂಡಿಂಗ್ ಪರೀಕ್ಷೆ  ಯಶಸ್ವಿಯಾಗಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಇಸ್ರೋ, ಭಾರತ ಪ್ರಮುಖವಾದ ಮತ್ತೊಂದು ಸಾಧನೆಯನ್ನು ಮಾಡಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಜೊತೆಗೂಡಿ ಏಪ್ರಿಲ್ 2 ರಂದು ಮುಂಜಾನೆ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಆಟಾನಮಸ್ ಲ್ಯಾಂಡಿಂಗ್ ಮಿಷನ್ ಅನ್ನು ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದೆ.

ಭಾರತೀಯ ವಾಯುಪಡೆ ಚಿನೂಕ್ ಹೆಲಿಕಾಪ್ಟರ್ ಆರ್ಎಲ್ವಿ ಎತ್ತಿಕೊಂಡು ಬೆಳಗ್ಗೆ 7:10ರ ವೇಳೆಗೆ ಟೇಕ್ ಆಫ್ ಆಗಿದೆ. 4.5 ಕಿ.ಮೀ ಎತ್ತರದಲ್ಲಿ ಹೆಲಿಕಾಪ್ಟರ್ ಆರ್ಎಲ್ವಿಯನ್ನು ಬಿಡುಗಡೆ ಮಾಡಿದೆ. ಇಂಟಿಗ್ರೇಟೆಡ್ ನ್ಯಾವಿಗೇಷನ್, ಗೈಡೆನ್ಸ್ ಹಾಗೂ ಕಂಟ್ರೋಲ್ ಸಿಸ್ಟಮ್ ಅನ್ನು ಬಳಸಿಕೊಂಡು 7:40ರ ವೇಳೆಗೆ ಆರ್ಎಲ್ವಿ ಏರ್ಸ್ಟ್ರಿಪ್ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. 

ಒಂದು ವೇಳೆ ಬಾಹ್ಯಾಕಾಶದಿಂದ ರಾಕೆಟ್ ಬಂದರೆ ಯಾವ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆಯೋ ಅಂಥದ್ದೇ ಪರಿಸ್ಥಿತಿಯಲ್ಲಿ ಮರು ಬಳಕೆ ಮಾಡಬಹುದಾದ ಉಡಾವಣಾ ವಾಹನದ ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಯನ್ನು ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments