Webdunia - Bharat's app for daily news and videos

Install App

ಶಶಿಕಲಾ ನಿವಾಸದಲ್ಲಿ 1430 ಕೋಟಿ ಮೌಲ್ಯದ ಚಿನ್ನ, ವಜ್ರ, ನಗದು ಹಣ ಪತ್ತೆ

Webdunia
ಮಂಗಳವಾರ, 14 ನವೆಂಬರ್ 2017 (13:18 IST)
ಜೈಲಿನಲ್ಲಿರುವ ಎಐಎಡಿಎಂಕೆ ನಾಯಕ ವಿ.ಕೆ. ಶಶಿಕಲಾ ಮತ್ತು ಜಯಾ ಟಿವಿ ಕುಟುಂಬದ ಒಡೆತನದ ಆವರಣದಲ್ಲಿ ನಡೆದ ದಾಳಿಗಳಲ್ಲಿ 1430 ಕೋಟಿ ರೂ. ಅಘೋಷಿತ ಆಸ್ತಿ ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.
ಐಟಿ ಇಲಾಖೆಯ ಶಶಿಕಲಾ ಸಂಬಂಧಿಕರು ಮತ್ತು ಜಯಾ ಟಿವಿ ಕಚೇರಿಗಳ ಮೇಲೆ ದಾಳಿ ನಡೆಸಿದಾಗ  1430 ಕೋಟಿ ಮೌಲ್ಯದ ಚಿನ್ನ, ವಜ್ರ, ನಗದು ಹಣ ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.
 
ಎಐಎಡಿಎಂಕೆ ನಾಯಕನ ಸೋದರಳಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಜಯರಾಮನ್‌ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.
 
ಶಶಿಕಲಾ ಮತ್ತು ಅವರ ಸಂಬಂಧಿಕರ ನಿವಾಸದ ಮೇಲೆ ದಾಳಿ ನಡೆಸಿದ ಸಮಯದಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ನಗದು ಮತ್ತು ಆಭರಣಗಳ ಮೇಲೆ 7 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. 15 ಬ್ಯಾಂಕ್ ಲಾಕರ್‌ಗಳು ಮತ್ತು ವಜ್ರದ ಆಭರಣಗಳನ್ನು "ನಿಷೇಧಿತ ಆದೇಶ" ಅಡಿಯಲ್ಲಿ ಇರಿಸಲಾಗಿದ್ದು, ಅದನ್ನು ವಶಪಡಿಸಿಕೊಳ್ಳಲು ನಿರಾಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
"ಹಲವು ದಾಖಲೆಗಳನ್ನು ಪತ್ತೆ ಹಚ್ಚಲಾಗಿದೆ ಮತ್ತು ಮೊದಲನೆಯದಾಗಿ ನಾವು ಬಹಿರಂಗಪಡಿಸದ 1,430 ಕೋಟಿ ರೂ. ಆದಾಯವನ್ನು ಪತ್ತೆ ಮಾಡಿದ್ದೇವೆ" ಎಂದು ಅನಾಮಧೇಯ ಅಧಿಕಾರಿ ಮೂಲಗಳು ತಿಳಿಸಿವೆ.
 
ವಿವರಿಸಲಾಗದ ನಗದುಗೆ ಸಂಬಂಧಿಸಿದಂತೆ ಹಲವಾರು ಕಂಪೆನಿಗಳನ್ನು ಖರೀದಿಸಿ ವ್ಯವಹಾರಗಳನ್ನು ನಡೆಸಲಾಗಿದೆ . ಶೆಲ್ ಕಂಪೆನಿಗಳ ಸಮಸ್ಯೆಯು ಪ್ರತ್ಯೇಕ ವಿಷಯವಾಗಿದೆ. ಅದರ ಬಗ್ಗೆ ಹೆಚ್ಚಿಗೆ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.
 
ಏತನ್ಮಧ್ಯೆ, ಜಯಾ ಟಿವಿ (ಮಾವಿಸ್ ಸ್ಯಾಟ್ಕಾಮ್ ಲಿಮಿಟೆಡ್) ನ ಮುಖ್ಯಸ್ಥ ವಿವೇಕ್ ಜಯರಾಮನ್ ಅವರನ್ನು ತೆರಿಗೆ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments