Webdunia - Bharat's app for daily news and videos

Install App

ಉದ್ಘಾಟನೆಗೆ 24 ಗಂಟೆಗಳಿರುವಂತೆಯೇ ಕುಸಿದ ಆಣೆಕಟ್ಟು: 389 ಕೋಟಿ ನೀರುಪಾಲು

Webdunia
ಬುಧವಾರ, 20 ಸೆಪ್ಟಂಬರ್ 2017 (16:19 IST)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಉದ್ಘಾಟನಾ ಸಮಾರಂಭಕ್ಕೆ 24 ಗಂಟೆಗಳ ಮುಂಚೆಯೇ 389.31 ಕೋಟಿ ರೂ. ವೆಚ್ಚದಿಂದ ನಿರ್ಮಿಸಲಾದ ಆಣೆಕಟ್ಟು ಕುಸಿದು ಹೋದ ಆಘಾತಕಾರಿ ಘಟನೆ ವರದಿಯಾಗಿದೆ.
ಜಿಲ್ಲಾಡಳಿತದ ಕಾರ್ಯವನ್ನು ಸಮರ್ಥಿಸಿಕೊಂಡಿರುವ  ಜಲ ಸಂಪನ್ಮೂಲ ಖಾತೆ ಸಚಿವ ಲಾಲನ್ ಸಿಂಗ್, ಒಂದೇ ಬಾರಿಗೆ ಆಣೆಕಟ್ಟಿನಿಂದ ನೀರು ಹೊರಬಿಟ್ಟಿರುವುದು ಡ್ಯಾಂ ಕುಸಿಯಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ. 
 
ಭಾಗಲ್ಪುರ್‌ನ ಕಹಲ್‌ಗಾಂವ್‌ನಲ್ಲಿ ನೀರಾವರಿ ಯೋಜನೆಯಡಿ ರಾಜ್ಯ ಸರಕಾರ 389.31 ಕೋಟಿ ರೂಪಾಯಿ ವೆಚ್ಚದಲ್ಲಿ ಬತೇಶ್ವರಸ್ಥಾನ್ ಗಂಗಾ ಪಂಪ್ ಕಾಲುವೆ ಯೋಜನೆಯಡಿ ಆಣೆಕಟ್ಟು ನಿರ್ಮಾಣ ಮಾಡಿತ್ತು.
 
ಅಣೆಕಟ್ಟಿನಲ್ಲಿ ನೀರು ಸಂಗ್ರಹಿಸಿ ರೈತರಿಗೆ ಅನುಕೂಲವಾಗುವಂತೆ ಮಾಡಲು ನಿರ್ಮಿಸಲಾಗಿತ್ತು. ಆಣೆಕಟ್ಟು ಒಡೆದು ಹೋಗಿದ್ದರಿಂದ ಕೆಳಮಟ್ಟದ ಪ್ರದೇಶಗಳ ಅನೇಕ ಮನೆಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಎದುರಿಸಬೇಕಾಗಿ ಬಂದಿತು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments