Select Your Language

Notifications

webdunia
webdunia
webdunia
webdunia

ಕೋರೆಗಾಂವ್ ಹಿಂಸಾಚಾರದಲ್ಲಿ ಆರ್‌ಎಸ್‌ಎಸ್‌ ಕೈವಾಡ– ಮಲ್ಲಿಕಾರ್ಜುನ ಖರ್ಗೆ ಆರೋಪ

ಕೋರೆಗಾಂವ್ ಹಿಂಸಾಚಾರದಲ್ಲಿ ಆರ್‌ಎಸ್‌ಎಸ್‌ ಕೈವಾಡ– ಮಲ್ಲಿಕಾರ್ಜುನ ಖರ್ಗೆ ಆರೋಪ
ನವದೆಹಲಿ , ಬುಧವಾರ, 3 ಜನವರಿ 2018 (14:43 IST)
ಕೋರೆಗಾಂವ್ ವಿಜಯೋತ್ಸವದ ಹಿಂಸಾಚಾರ ಪ್ರಕರಣ ಹಿಂದೆ ರಾಷ್ಟ್ರೀಯ ಸ್ವಯಂ ಸೇವಾ ಸಂಘದ (ಆರ್‌ಎಸ್‌ಎಸ್) ಕೈವಾಡವಿದೆ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
 
ಕೋರೆಗಾಂವ್‌ ಹಿಂಸಾಚಾರ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯಲ್ಲಿ ಮಾತನಾಡಿ, ಬಿಜೆಪಿ ಆಡಳಿತದಲ್ಲಿರುವ ಪ್ರದೇಶಗಳಲ್ಲೇ ಹೆಚ್ಚು ಹಿಂಸಾಚಾರಗಳು ನಡೆಯುತ್ತಿವೆ. ಭೀಮ್ ಕೋರೆಗಾಂವ್ ಹಿಂಸಾಚಾರಕ್ಕೆ ಮಹಾರಾಷ್ಟ್ರ ಸರ್ಕಾರವೇ ನೇರ ಹೊಣೆ. ಸುರ್ಪೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕು. ಹಿಂಸಾಚಾರಕ್ಕೆ ಕಾರಣರಾದವನ್ನು ಹಿಡಿದು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಈ ವಿಷಯದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನವಾಗಿ ಇರಬಾರದು. ಹಿಂಸಾಚಾರದ ಬಗ್ಗೆ ಸದನಕ್ಕೆ ಉತ್ತರಿಸಬೇಕು ಪಟ್ಟು ಹಿಡಿದರು. ಇದಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು ಪುಣೆ ಹಿಂಚಾಸಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ.
 
ಇದರಿಂದ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಯಿತು. ಸ್ಪೀಕರ್ ಸುಮಿತ್ರ ಮಹಾಜನ್ ಅವರು ಸದವನ್ನು ಮುಂದೂಡಿದರು
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವೀರಶೈವ, ಲಿಂಗಾಯತ ಎರಡೂ ಒಂದೇ– ಬಿಎಸ್‌ವೈ