Webdunia - Bharat's app for daily news and videos

Install App

ಆರೆಸ್ಸೆಸ್ ನೋಂದಣಿಯಾಗದ ಸಂಸ್ಥೆ ದೇಣಿಗೆ ಲೆಕ್ಕ ಕೊಡಲಿ: ದಿಗ್ವಿಜಯ್ ಸಿಂಗ್

Webdunia
ಭಾನುವಾರ, 24 ಜುಲೈ 2016 (16:26 IST)
ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿಯಾಗದ ಸಂಸ್ಥೆಯಾಗಿದ್ದು, ವಿಶೇಷವಾಗಿ ಗುರು ಪೂರ್ಣಮಾ ದಿನದಂದು ಮತ್ತು ವರ್ಷಾಂತ್ಯದವರೆಗೆ ಸಂಗ್ರಹಿಸಿದ ದೇಣಿಗೆಯ ಬಗ್ಗೆ ವಿವರ ಬಹಿರಂಗಪಡಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಒತ್ತಾಯಿಸಿದ್ದಾರೆ.
 
ಆರೆಸ್ಸೆಸ್ ಸಂಸ್ಥೆ ನೋಂದಾಯಿತವಾಗದ ಸಂಸ್ಥೆಯಾಗಿದೆ. ಆದ್ದರಿಂದ ಆರೆಸ್ಸೆಸ್ ನಿಷೇಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
 
ಆರೆಸ್ಸೆಸ್ ಸಂಸ್ಥೆ ಗುರು ಪೂರ್ಣಿಮಾ ಹಬ್ಬದಂದು ಭಾರಿ ಪ್ರಮಾಣದಲ್ಲಿ ದೇಣಿಗೆ ಸಂಗ್ರಹಿಸುತ್ತದೆ. ದೇಣಿಗೆಯ ಬಗ್ಗೆ ಯಾವುದೇ ವಿವರಗಳು ಲಭ್ಯವಿಲ್ಲ. ಗುರು ದಕ್ಷಿಣೆ ರೂಪದಲ್ಲಿ ಎಷ್ಟು ಪ್ರಮಾಣದಲ್ಲಿ ದೇಣಿಗೆ ಸಂಗ್ರಹಿಸಲಾಗುತ್ತದೆ. ಯಾವ ದೇಣಿಗೆಯ ಬಗ್ಗೆ ಲೆಕ್ಕವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಆರೆಸ್ಸೆಸ್ ನೋಂದಾಯಿತ ಸಂಸ್ಥೆಯಾಗಿರದ ಹಿನ್ನೆಲೆಯಲ್ಲಿ ಯಾವುದೇ ಕಾಯ್ದೆಯಡಿ ಬರುವುದಿಲ್ಲ. ದೇಣಿಗೆ ಬಂದ ಹಣ ಎಲ್ಲಿ ಹೋಗುತ್ತಿದೆ ಎನ್ನುವ ಬಗ್ಗೆ ಆರೆಸ್ಸೆಸ್ ಬೆಳಕು ಚೆಲ್ಲಬೇಕಾಗಿದೆ ಎಂದರು.
 
ಗುಜರಾತ್ ರಾಜ್ಯದ ಉನಾ ಜಿಲ್ಲೆಯಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆರೆಸ್ಸೆಸ್ ಬೆಂಬಲಿತ ಸಂಘಟನೆಗಳೂ ಕೂಡಾ ನೋಂದಣಿಯಾಗಿಲ್ಲ. ಸ್ಥಳೀಯ ಪೊಲೀಸರ ನೆರವಿನಿಂದ ದೇಣಿಗೆ ಸಂಗ್ರಹಿಸುತ್ತಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ. 

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments