ಮಹಾತ್ಮಾ ಗಾಂಧಿ ಹತ್ಯೆಯಾದಾಗ ಆರೆಸ್ಸೆಸ್ ಸಿಹಿ ಹಂಚಿ ಸಂಭ್ರಮಿಸಿತ್ತು: ಕಾಂಗ್ರೆಸ್

Webdunia
ಶನಿವಾರ, 27 ಆಗಸ್ಟ್ 2016 (16:33 IST)
ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಶಾಂತಿ ಮತ್ತು ಸಾಮರಸ್ಯತೆಯನ್ನು ವಿರೋಧಿಯಾಗಿದ್ದು ಅವರ ಹತ್ಯೆಯಾದಾಗ ಸಿಹಿ ಹಂಚಿ ಸಂಭ್ರಮಿಸಿತ್ತು ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
 
ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಸಂಸ್ಥೆಯ ಕೈವಾಡವಿದೆ ಎನ್ನುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಆರೆಸ್ಸೆಸ್ ಟೀಕೆಗಳನ್ನು ಮುಂದುವರಿಸಿರುವಂತೆ ಕಾಂಗ್ರೆಸ್ ಹೇಳಿಕೆ ಹೊರಬಿದ್ದಿದೆ.
 
ಕಾಂಗ್ರೆಸ್ ಮುಖಂಡ ರಿಜ್ವಾನ್ ಅರ್ಶದ್ ಸುದ್ದಿಗಾರರೊಂದಿಗೆ ಮಾತನಾಡಿ, ಆರೆಸ್ಸೆಸ್ ಸಂಸ್ಥೆ ಸ್ವ ಹಿತಾಸಕ್ತಿಗಾಗಿ ಬದ್ಧವಾಗಿದ್ದರಿಂದ ಕಾಂಗ್ರೆಸ್ ಪಕ್ಷ ಆರೆಸ್ಸೆಸ್ ವಿರುದ್ಧದ ಹೋರಾಟ ಮುಂದುವರಿಸಲಿದೆ ಎಂದರು.
 
ಮಹಾತ್ಮಾ ಗಾಂಧಿ ಹತ್ಯೆಯ ರೂವಾರಿ ನಾಥುರಾಮ್ ಗೋಡ್ಸೆ ಆರೆಸ್ಸೆಸ್ ಸಂಘಟನೆಗೆ ಸೇರಿದವನು ಎನ್ನುವುದು ಜಗಜ್ಜಾಹಿರ ಸಂಗತಿ. ಗಾಂಧಿದೇಶದ ಎಲ್ಲಾ ಸಮುದಾಯದವರು ಒಗ್ಗಟ್ಟಿನಿಂದ ಬಾಳಿ ದೇಶದ ಅಖಂಡತೆಯನ್ನು ಕಾಪಾಡಿಕೊಳ್ಳುವಂತೆ ನೀಡಿದ ಕರೆಯಿಂದ ಆರೆಸ್ಸೆಸ್ ಅಸಮಾಧಾನಗೊಂಡು ಹತ್ಯೆ ಮಾಡಿತ್ತು ಎಂದು ಆರೋಪಿಸಿದ್ದಾರೆ. 
 
ಮಹಾತ್ಮಾ ಗಾಂಧಿ ಹತ್ಯೆಯಾದಾಗ ಆರೆಸ್ಸೆಸ್ ಸಿಹಿ ಹಂಚಿ ಸಂಭ್ರಮಿಸಿತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಗೆ ದೇಶದಲ್ಲಿ ರಕ್ತಪಾತವಾಗುವುದು ಬೇಕಾಗಿತ್ತು. ಮಹಾತ್ಮಾ ಗಾಂಧಿ ಹತ್ಯೆಗೆ ಅದರ ಸಿದ್ಧಾಂತವೇ ಕಾರಣವಾಯಿತು ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಅರ್ಶದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments