Publish Date: Mon, 30 May 2022 (11:02 IST)
Updated Date: Mon, 30 May 2022 (11:28 IST)
ನವದೆಹಲಿ : ಕೋವಿಡ್ ಹೆಮ್ಮಾರಿಯಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಆರಂಭಿಸಿತ್ತು.
ಈ ಯೋಜನೆಯಡಿ ಇವತ್ತು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಇಂದು ಬೆಳಗ್ಗೆ 11 ಗಂಟೆಗೆ ಈ ಯೋಜನೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ಸ್ಕಾಲರ್ಶಿಪ್ಗೆ ಸಂಬಂಧಿಸಿದ ಪೋಸ್ಟ್ ಆಫೀಸ್ ಪಾಸ್ಬುಕ್ ಜೊತೆಗೆ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಕೂಡ ನೀಡಲಾಗುತ್ತದೆ ಎಂದು ಪ್ರಧಾನಿಮಂತ್ರಿಗಳ ಕಾರ್ಯಾಲಯ ತಿಳಿಸಿದೆ.
2020 ಮಾರ್ಚ್ 11ರಿಂದ 2022ರ ಮಾರ್ಚ್ 28ರ ಅವಧಿಯಲ್ಲಿ ಕೋವಿಡ್ನಿಂದ ಸಾವನ್ನಪ್ಪಿದವರ ಮಕ್ಕಳು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಸಮಗ್ರ ರಕ್ಷಣೆಯ ಭಾಗವಾಗಿ ಈ ಮಕ್ಕಳಿಗೆ ವಸತಿ, ವಿದ್ಯೆ, ಸ್ಕಾಲರ್ಶಿಪ್ ಸಿಗಲಿದೆ. ಉನ್ನತ ಶಿಕ್ಷಣಕ್ಕೂ ನೆರವು ಸಿಗಲಿದೆ.