Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ರಷ್ಯಾ ಅಧ್ಯಕ್ಷರ ವಿಮಾನ

Webdunia
ಶನಿವಾರ, 15 ಅಕ್ಟೋಬರ್ 2016 (12:30 IST)
ಬ್ರಿಕ್ಸ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಗೋವಾಕ್ಕೆ ಹೋಗುತ್ತಿದ್ದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ವಿಶೇಷ ವಿಮಾನ ಬೆಂಗಳೂರಿನ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹವಾಮಾನ ವೈಪರೀತ್ಯವೇ ಇದಕ್ಕೆ ಕಾರಣವೆನ್ನಲಾಗಿದೆ. 
ಗೋವಾದಲ್ಲಿ ಮುಂಜಾನೆಯಿಂದ ಮಂಜು ಮುಸುಕಿದ ವಾತಾವರಣವಿದ್ದರಿಂದ ಪುಟಿನ್ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಸುಮಾರು 15 ನಿಮಿಷ, ವಿಮಾನ ನಿಲ್ದಾಣದಲ್ಲಿ ನಿಂತಿದ್ದಾಗ ಪುಟಿನ್ ಅದರಲ್ಲಿ ಕುಳಿತಿದ್ದರು. ಬಳಿಕ ವಿಮಾನ ಗೋವಾದತ್ತ ತೆರಳಿದೆ. ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. 
 
ಪುಟಿನ್ ಅವರಿದ್ದ ವಿಮಾನ ಸುರಕ್ಷಿತವಾಗಿ ಪಣಜಿ ವಿಮಾನ ನಿಲ್ದಾಣದಲ್ಲಿಳಿದಿದೆ ಎಂದು ತಿಳಿದು ಬಂದಿದೆ. 
 
ಇಂದಿನಿಂದ ಎರಡು ದಿನಗಳ ಕಾಲ ಗೋವಾದ ರಾಜಧಾನಿ ಪಣಜಿಯಲ್ಲಿ ಐದು ರಾಷ್ಟ್ರಗಳನ್ನೊಳಗೊಂಡ 8ನೇ ಬ್ರಿಕ್ಸ್ ಸಮಾವೇಶ ಆರಂಭವಾಗುತ್ತಿದ್ದು,  ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿವೆ. ರಾಜತಾಂತ್ರಿಕ ಸಂಬಂಧ ವೃತ್ತಿ, ವ್ಯಾಪಾರ ಹಾಗೂ ಹೂಡಿಕೆಯಲ್ಲಿ ಹೆಚ್ಚಳ ಮತ್ತು ಭಯೋತ್ಪಾದನೆ ಸೇರಿದಂತೆ ಅನೇಕ ವಿಷಯಗಳು ಸಮಾವೇಶದಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ.
 
ಅಲ್ಲದೇ ಚೀನಾ ಮತ್ತು ರಷ್ಯಾ ಮುಖಂಡರ ಜತೆ ಪ್ರಧಾನಿ ಮೋದಿ ಪ್ರತ್ಯೇಕ ಮಾತುಕತೆಯನ್ನು ಸಹ ನಡೆಸಲಿದ್ದಾಕೆ.  ಪುಟಿನ್ ಜತೆ 60,000 ಕೋಟಿ ರೂಪಾಯಿಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.
 
ಉಗ್ರ ದಾಳಿ ಭೀತಿ ಹಿನ್ನೆಲೆಯಲ್ಲಿ ಬ್ರಿಕ್ಸ್ ಸಮ್ಮೇಳನಕ್ಕೆ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಂದಿನ ಸುದ್ದಿ
Show comments