Webdunia - Bharat's app for daily news and videos

Install App

ಜವಹರಲಾಲ್ ನೆಹರೂಗೆ ಚೀನಾ ಫಸ್ಟ್, ಭಾರತ ನೆಕ್ಸ್ಟ್ ಆಗಿತ್ತು: ಸಚಿವ ಜೈಶಂಕರ್

Krishnaveni K
ಬುಧವಾರ, 3 ಏಪ್ರಿಲ್ 2024 (09:23 IST)
Photo Courtesy: Twitter
ಅಹಮ್ಮದಾಬಾದ್: ಭಾರತದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂಗೆ ಚೀನಾ ಫಸ್ಟ್, ಭಾರತ ನೆಕ್ಸ್ಟ್ ಎಂಬ ಧೋರಣೆಯಿತ್ತು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟೀಕಿಸಿದ್ದಾರೆ.

ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಜೈಶಂಕರ್ ಭಾರತದ ಪ್ರಥಮ ಪ್ರಧಾನಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ, ಚೀನಾದ ಜೊತೆಗೆ ಭಾರತದ ಧೋರಣೆ ಕುರಿತಾಗಿ ಅವರು ಟೀಕಿಸಿದ್ದಾರೆ.

‘1950 ರಲ್ಲೇ ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಾಯಿ ಪಟೇಲ್ ಚೀನಾದ ಬಗ್ಗೆ ನೆಹರೂಗೆ ಎಚ್ಚರಿಕೆ ನೀಡಿದ್ದರು. ಪಟೇಲ್ ಅಂದೇ ಚೀನಾ ಮತ್ತು ಪಾಕಿಸ್ತಾನ ನಮಗೆ ಮುಳ್ಳಾಗಬಹುದು. ಚೀನಾದ ಉದ್ದೇಶ ಸರಿ ಇಲ್ಲ. ಆ ದೇಶ ನಂಬಿಕೆಗೆ ಅರ್ಹವಲ್ಲ. ನಾವು ಎಚ್ಚರಿಕೆಯಲ್ಲಿರಬೇಕು ಎಂದಿದ್ದರು. ಆದರೆ ಪಟೇಲ್ ಮಾತುಗಳನ್ನು ನೆಹರೂ ಕಿವಿ ಮೇಲೇ ಹಾಕಿಕೊಳ್ಳಲಿಲ್ಲ. ಬದಲಾಗಿ ನೀವು ಅನಗತ್ಯವಾಗಿ ಚೀನಾವನ್ನು ಸಂಶಯಿಸುತ್ತಿದ್ದೀರಿ ಎಂದು ದೂರಿದರು. ಹಿಮಾಲಯ ದಾಟಿ ಚೀನಾಗೆ ನಮ್ಮ ಮೇಲೆ ಆಕ್ರಮಣ ಮಾಡಲು ಸಾಧ್ಯವಿಲ್ಲ ಎಂದರು. ಬಳಿಕ ವಿಶ್ವಸಂಸ್ಥೆ ಸದಸ್ಯತ್ವ ಸಿಗುತ್ತದೆ ಎಂದಾಗಲೂ ಮೊದಲು ಚೀನಾಗೆ ಸಿಗಲಿ ಎಂದರು. ಚೀನಾ ಮೊದಲು ನಾವು ನಂತರ ಎಂದು ಭಾರತದ ಅಂದಿನ ಪ್ರಧಾನಿ ಹೇಳಿದ್ದು ಇದೆ’ ಎಂದು ಜೈಶಂಕರ್ ವಾಗ್ದಾಳಿ ನಡೆಸಿದ್ದಾರೆ.

‘ಈಗ ಕೆಲವರು ಗಡಿ ಬಗ್ಗೆ ಮಾತನಾಡುತ್ತಾರೆ. ಆದರೆ ನಮ್ಮ ಗಡಿ ಯಾರಿಗೂ ಬಿಟ್ಟುಕೊಟ್ಟಿಲ್ಲ’ ಎಂದು ಚೀನಾಕ್ಕೆ ಮೋದಿ ಸರ್ಕಾರ ಭಾರತದ ಗಡಿ ಆಕ್ರಮಿಸಿಕೊಳ್ಳಲು ಬಿಟ್ಟಿದೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments