Webdunia - Bharat's app for daily news and videos

Install App

ಹಿಜ್ಬುಲ್ ನೂತನ ಕಮಾಂಡರ್ ಸಬ್ಜಾರ್ ಬಟ್ ಸೇರಿ 8 ಉಗ್ರರ ಹತ್ಯೆ

Webdunia
ಶನಿವಾರ, 27 ಮೇ 2017 (12:46 IST)
ಶ್ರೀನಗರ:ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ನೂತನ ಕಮಾಂಡರ್ ಆಗಿ ನೇಮಕಗೊಂಡಿದ್ದ ಉಗ್ರ ಸಬ್ಜಾರ್ ಬಟ್ ಸೇರಿ ಒಟ್ಟು 8 ಉಗ್ರರು ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಬಲಿಯಾಗಿರುವುದಾಗಿ ತಿಳಿದುಬಂದಿದೆ. 
 
ಜಮ್ಮು ಕಾಶ್ಮೀರದ ತ್ರಾಲ್ ನಲ್ಲಿ ಉಗ್ರರು ಹಾಗೂ ನುಸುಳುಕೋರರನ್ನು ಮಟ್ಟಹಾಕಲು ಮುಂದಾಗಿರುವ ಭದ್ರತಾ ಪಡೆಗಳು ಇಂದು ನಡೆಸಿದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಸಬ್ಜಾರ್ ಸೇರಿ 8 ಮಂದಿ ಉಗ್ರರನ್ನು ಹೊಡೆದುರುಳಿಸಿವೆ. 
 
ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಭದ್ರತಾ ಪಡೆಯ ಗುಂಡಿಗೆ ಬಲಿಯಾದ ಬಳಿಕ ಸಂಘಟನೆಯ ನೂತನ ಕಮಾಂಡರ್ ಆಗಿ ಸಬ್ಜಾರ್ ನೇಮಕಗೊಂಡಿದ್ದ. ಪುಲ್ವಾಮಾ ಜಿಲ್ಲೆಯ ತ್ರಾಲ್ ಸೆಕ್ಟರ್ ನ ಬಿಲ್ಡಿಂಗ್ ನಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರು ಭಾರತೀಯ ಸೇನಾ ಪಡೆ ದಾಳಿಗೆ ಬಲಿಯಾಗಿದ್ದಾರೆ. ಬಲಿಯಾದವರಲ್ಲಿ ಓರ್ವ ಸಬ್ಜಾರ್ ಭಟ್ ಎಂದು ತಿಳಿದುಬಂದಿದೆ.
 
ಇದೇ ವೇಳೆ ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಆರು ಮಂದಿ ಉಗ್ರರನ್ನು ಭಾರತೀಯ ಸೇನಾ ಪಡೆ ಗುಂಡಿಟ್ಟು ಹತ್ಯೆಗೈದಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments