Publish Date: Sun, 07 Feb 2021 (12:46 IST)
Updated Date: Sun, 07 Feb 2021 (12:48 IST)
ನವದೆಹಲಿ : ಸಚಿನ್ ಭಾರತ ರತ್ನಕ್ಕೆ ಅರ್ಹರಲ್ಲ ಎಂದು ಕಾಂಗ್ರೆಸ್ ಸಂಸದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಫೆ.4, 2014ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಚಿನ್ ತೆಂಡುಲ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದರು. ಆದರೆ ಇತ್ತೀಚೆಗೆ ಸಚಿನ್ ಅವರು ರೈತ ಪ್ರತಿಭಟನೆ ಬೆಂಬಲಿಸಿ ರಿಹಾನ್ನಾ ಮಾಡಿದ ಟ್ವೀಟ್ ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಸಂಸದ ಜಸ್ ಬೀರ್ ಗಿಲ್, ಸಚಿನ್ ಭಾರತ ರತ್ನಕ್ಕೆ ಅರ್ಹರಲ್ಲ . ಅವರು ತನ್ನ ಮಗನನ್ನು ಐಪಿಎಲ್ ನಲ್ಲಿ ಆಡಿಸಲು ಲಾಬಿ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ಸರ್ಕಾರದ ಪರ ಸಚಿನ್ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.