Webdunia - Bharat's app for daily news and videos

Install App

ಗ್ರಾಮವೊಂದನ್ನು ದತ್ತು ಪಡೆಯಲಿರುವ ಸಚಿನ್‌ ತೆಂಡೂಲ್ಕರ್‌

Webdunia
ಶುಕ್ರವಾರ, 17 ಅಕ್ಟೋಬರ್ 2014 (11:47 IST)
ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡೂಲ್ಕರ್, ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮವೊಂದನ್ನು ದತ್ತು ಪಡೆದು ಆ ಗ್ರಾಮದ  ಮೂಲಸೌಕರ್ಯ ಅಭಿವೃದ್ಧಿ ಅಭಿವೃದ್ಧಿಪಡಿಸಲು ನಿರ್ಧರಿಸಿದ್ದಾರೆ. 

ಪ್ರಧಾನಿ ಮೋದಿಯವರು ಸ್ವಾತಂತ್ರ್ಯೋತ್ಸವದ ದಿನದಂದು ಪ್ರತಿಯೊಬ್ಬ ಸಂಸದರು ಗ್ರಾಮವೊಂದನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದ್ದರು. ಪ್ರಧಾನಿ ಮೋದಿಯವರ ಈ ಆದರ್ಶ ಗ್ರಾಮ ಯೋಜನೆಯಲ್ಲಿ ಪಾಲ್ಗೊಳ್ಳಲು  ಕ್ರಿಕೆಟಿಗ ದಾಪುಗಾಲು ಹಾಕುತ್ತಿದ್ದಾರೆ. 
 
ಕಳೆದ ಗುರುವಾರ ಪತ್ನಿ ಸಮೇತರಾಗಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಾತನಾಡಿದ ಸಚಿನ್ ತಮ್ಮ ಈ ನಿರ್ಧಾರವನ್ನು ಮೋದಿಯವರಿಗೆ ತಿಳಿಸಿದ್ದಾರೆ. ಈ ಕುರಿತು ಪ್ರಧಾನಿ ತಮ್ಮ ಟ್ವಿಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. 
 
ಪ್ರಧಾನಿ ಮೋದಿಯವರ ಬಳಿ ತಾವು ಸ್ವಚ್ಛ ಭಾರತ ಯೋಜನೆಯಲ್ಲಿ ಕೂಡ ಸಕ್ರಿಯವಾಗಿ ಪಾಲ್ಗೊಂಡ ವಿಚಾರವನ್ನು ಸಚಿನ್ ಹಂಚಿಕೊಂಡಿದ್ದಾರೆ. 
 
ಕಳೆದ ಅಕ್ಟೋಬರ್ ಎರಡರಂದು ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದ  ಪ್ರಧಾನಿಯವರು, ಇದರಲ್ಲಿ ಭಾಗಿಯಾಗುವಂತೆ ಸಚಿನ್‌ ಸೇರಿ ಕೆಲವರಿಗೆ ಆಹ್ವಾನ ನೀಡಿದ್ದರು. ಇದಕ್ಕೆ ಸ್ಪಂದಿಸಿದ್ದ ಸಚಿನ್‌, ಮುಂಬೈನಲ್ಲಿ ತಂಡವೊಂದನ್ನು ಕಟ್ಟಿಕೊಂಡು ಅಭಿಯಾನದಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಲ್ಲದೆ, ಇತರರು ಸಹ ಇದರಲ್ಲಿ ಪಾಲ್ಗೊಳ್ಳುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments