Webdunia - Bharat's app for daily news and videos

Install App

10 ವರ್ಷಗಳ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿದ್ದ ಮಾಜಿ ಸಚಿವ ಇಂದು ನೂರಾರು ಕೋಟಿ ರೂ. ಒಡೆಯ

Webdunia
ಬುಧವಾರ, 14 ಸೆಪ್ಟಂಬರ್ 2016 (15:40 IST)
ಕಳೆದ 10 ವರ್ಷಗಳ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿದ್ದ ಉತ್ತರಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ, ಇದೀಗ ನೂರಾರು ಕೋಟಿ ರೂಪಾಯಿಗಳ ಆಸ್ತಿಯ ಒಡೆಯರಾಗಿರುವುದು ಆಘಾತ ಮೂಡಿಸಿದೆ.
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತವರು ಕ್ಷೇತ್ರವಾದ ಅಮೇಥಿ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿ ಗಣಿ ಇಲಾಖೆ ಸಚಿವರಾಗಿರುವ ಪ್ರಜಾಪತಿ ಮತ್ತು ಮತ್ತೊಬ್ಬ ಸಚಿವ ರಾಜ್ ಕಿಶೋರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಭ್ರಷ್ಟಾಚಾರ, ಭೂ ಕಬಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಸ್ಥಾನದಿಂದ ವಜಾಗೊಳಿಸಿದ್ದಾರೆ. 
 
ಅಮೇಥಿ ಮೂಲಗಳ ಪ್ರಕಾರ, ಕಳೆದ 2002ರಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ್ದ ಪ್ರಜಾಪತಿ, 2012ರ ಚುನಾವಣೆಯಲ್ಲಿ 1.83 ಕೋಟಿ ರೂಪಾಯಿಗಳ ಆಸ್ತಿಯ ವಿವರ ಘೋಷಿಸಿಕೊಂಡಿದ್ದಾರೆ. ಆದರೆ, ಸ್ಥಳೀಯ ಮೂಲಗಳ ಪ್ರಕಾರ ಪ್ರಜಾಪತಿ ನೂರಾರು ಕೋಟಿ ರೂಪಾಯಿಗಳ ಮಾಲೀಕನಾಗಿದ್ದಾನೆ ಎಂದು ತಿಳಿಸಿದ್ದಾರೆ.
 
ಸಾಮಾಜಿಕ ಕಾರ್ಯಕರ್ತೆಯಾದ ನೂತನ್ ಠಾಕೂರ್, ಲೋಕಾಯುಕ್ತಕ್ಕೆ ದೂರು ಸಲ್ಲಿಸಿ ಲಕ್ನೋ ಮತ್ತು ಅಮೇಥಿಯಲ್ಲಿ ಪ್ರಜಾಪತಿ ಮತ್ತು ಆತನ ಕುಟುಂಬದವರು ಹಲವು ಕಂಪೆನಿಗಳನ್ನು ಹೊಂದಿದ್ದು, ನೂರಾರು ಕೋಟಿ ರೂಪಾಯಿಗಳ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
 
ಪ್ರತಾಪ್ ಗಢ್ ಜಿಲ್ಲೆಯ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರೊಬ್ಬರು, ಮಾಜಿ ಸಚಿವ ಪ್ರಜಾಪತಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ಅಂದಾಜು 300 ಕೋಟಿ ರೂಪಾಯಿಗಳ ಆಸ್ತಿಯನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments