Webdunia - Bharat's app for daily news and videos

Install App

ಮನೋಹರ್ ಪರಿಕ್ಕರ್ ಹಿಂದೂಗಳನ್ನು ವಂಚಿಸಿದ್ದಾರೆ: ಆರೆಸ್ಸೆಸ್ ಮುಖ್ಯಸ್ಥ

Webdunia
ಗುರುವಾರ, 1 ಸೆಪ್ಟಂಬರ್ 2016 (19:48 IST)
ಗೋವಾ ರಾಜ್ಯದ ಆರೆಸ್ಸೆಸ್ ಮುಖ್ಯಸ್ಥ ಸುಭಾಷ್ ವೆಲಿಂಗಕರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ ಮಾರನೇ ದಿನವೇ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

 
ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ಅಲ್ಪಸಂಖ್ಯಾತರನ್ನು ಓಲೈಸುತ್ತಾ ಹಿಂದೂಗಳನ್ನು ವಂಚಿಸಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿ, ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
 
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ತಿಳಿಸಿದ್ದಾರೆ. 
 
ಕಳೆದ ಎರಡು ದಶಕಗಳಿಂದ ಗೋವಾ ರಾಜ್ಯದ ಆರೆಸ್ಸೆಸ್ ಮುಖ್ಯಸ್ಥರಾಗಿದ್ದ ವೆಲಿಂಗಕರ್, ನನಗೆ ಯಾವುದೇ ರಾಜಕೀಯ ಮಹತ್ವಕಾಂಕ್ಷೆಯಿಲ್ಲ. ಆದರೆ, ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಗುಡುಗಿದ್ದಾರೆ.
 
ವೆಲಿಂಗಕರ್ ಅವರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಈಗಾಗಲೇ 400 ಆರೆಸ್ಸೆಸ್ ಕಾರ್ಯಕರ್ತರು ಆರೆಸ್ಸೆಸ್ ತೊರೆದಿದ್ದಾರೆ. ಮುಂದಿನ ವರ್ಷ ಗೋವಾದಲ್ಲಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ವೆಲಿಂಗಕರ್ ಘಟನೆ ಯಾವ ರೀತಿ ಪ್ರಭಾವ ಬೀರುತ್ತದೆಯೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments