Webdunia - Bharat's app for daily news and videos

Install App

ಮನೋಹರ್ ಪರಿಕ್ಕರ್ ಹಿಂದೂಗಳನ್ನು ವಂಚಿಸಿದ್ದಾರೆ: ಆರೆಸ್ಸೆಸ್ ಮುಖ್ಯಸ್ಥ

Webdunia
ಗುರುವಾರ, 1 ಸೆಪ್ಟಂಬರ್ 2016 (19:48 IST)
ಗೋವಾ ರಾಜ್ಯದ ಆರೆಸ್ಸೆಸ್ ಮುಖ್ಯಸ್ಥ ಸುಭಾಷ್ ವೆಲಿಂಗಕರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ ಮಾರನೇ ದಿನವೇ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

 
ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ಅಲ್ಪಸಂಖ್ಯಾತರನ್ನು ಓಲೈಸುತ್ತಾ ಹಿಂದೂಗಳನ್ನು ವಂಚಿಸಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿ, ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
 
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ತಿಳಿಸಿದ್ದಾರೆ. 
 
ಕಳೆದ ಎರಡು ದಶಕಗಳಿಂದ ಗೋವಾ ರಾಜ್ಯದ ಆರೆಸ್ಸೆಸ್ ಮುಖ್ಯಸ್ಥರಾಗಿದ್ದ ವೆಲಿಂಗಕರ್, ನನಗೆ ಯಾವುದೇ ರಾಜಕೀಯ ಮಹತ್ವಕಾಂಕ್ಷೆಯಿಲ್ಲ. ಆದರೆ, ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಗುಡುಗಿದ್ದಾರೆ.
 
ವೆಲಿಂಗಕರ್ ಅವರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಈಗಾಗಲೇ 400 ಆರೆಸ್ಸೆಸ್ ಕಾರ್ಯಕರ್ತರು ಆರೆಸ್ಸೆಸ್ ತೊರೆದಿದ್ದಾರೆ. ಮುಂದಿನ ವರ್ಷ ಗೋವಾದಲ್ಲಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ವೆಲಿಂಗಕರ್ ಘಟನೆ ಯಾವ ರೀತಿ ಪ್ರಭಾವ ಬೀರುತ್ತದೆಯೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments