ಮುಂಬೈ ಸ್ಫೋಟದ ರೂವಾರಿ ಯಾಕೂಬ್ ಮೆಮನ್ ಗಲ್ಲು ಶಿಕ್ಷೆಯನ್ನು ವಿರೋಧಿಸಿದ ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅಸಾದುದ್ದೀನ್ ಓವೈಸಿಗೆ ಕೂಡಾ ಗಲ್ಲು ಶಿಕ್ಷೆ ನೀಡಬೇಕು ಎಂದು ಇಂದೋರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಉಷಾ ಠಾಕೂರ್ ಗುಡುಗಿದ್ದಾರೆ.
ಯಾಕೂಬ್ ಮೆಮನ್ಗೆ ಗಲ್ಲು ಶಿಕ್ಷೆ ನೀಡಿರುವ ಬಗ್ಗೆ ಸಲ್ಮಾನ್ ಖಾನ್ ಮತ್ತು ಓವೈಸಿ ಟ್ವಿಟ್ಟರ್ನಲ್ಲಿ ದಾಖಲಿಸಿರುವ ಸಂದೇಶಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಬ್ಬರಿಗೂ ಯಾಕೂಬ್ಗೆ ನೀಡಿದ ರೀತಿಯಲ್ಲಿ ಶಿಕ್ಷೆ ನೀಡಬೇಕು ಎಂದರು.
ಮೆಮನ್ಗೆ ಬಗ್ಗೆ ಸಲ್ಮಾನ್ ಖಾನ್ ಮತ್ತು ಓವೈಸಿ ನೀಡಿದ ಹೇಳಿಕೆಗಳು ಅಸಂವಿಧಾನಿಕ ಎಂದು ತಿರುಗೇಟು ನೀಡಿದರು.
ಗರ್ಭಾ ಹಬ್ಬದ ಸಂದರ್ಭದಲ್ಲಿ ಪ್ರತಿ ವರ್ಷ 4-5 ಹಿಂದು ಯುವತಿಯರು ಮುಸ್ಲಿಂ ಸಮುದಾಯಕ್ಕೆ ಪರಿವರ್ತನೆ ಹೊಂದಲು ಮುಸ್ಲಿಂ ಯುವಕರು ಕಾರಣರಾಗಿದ್ದರಿಂದ ಗರ್ಭಾ ಪಂಡಲ್ಗಳಲ್ಲಿ ಮುಸ್ಲಿಮರ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿದರು.
ಅತ್ಯಾಚಾರವೆಸಗಿದ ಆರೋಪಿಗಳಿಗೆ ಸಾರ್ವಜನಿಕವಾಗಿ ನೇಣಿಗೇರಿಸಬೇಕು. ಇಲ್ಲವಾದಲ್ಲಿ ಆರೋಪಿಗಳಿಗೆ ಯಾವುದೇ ರೀತಿಯ ಭಯವಿರುವುದಿಲ್ಲ. ಕಾನೂನು ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಇಂದೋರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಉಷಾ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.