Webdunia - Bharat's app for daily news and videos

Install App

ಗಾಂಧಿ ಜಯಂತಿಯಂದು ಗೋಡ್ಸೆಗೆ ನಮಿಸುತ್ತಾರಂತೆ ಇವರು

Webdunia
ಸೋಮವಾರ, 3 ಅಕ್ಟೋಬರ್ 2016 (12:33 IST)
ಮಹಾತ್ಮಾ ಗಾಂಧಿ ಹತ್ಯೆಯನ್ನು ಸಮರ್ಥಿಸಿಕೊಂಡಿರುವ ವಿಹೆಚ್‌ಪಿ ನಾಯಕಿ ಸಾಧ್ವಿ ಪ್ರಾಚಿ, ಅಂದು ಗೋಡ್ಸೆ ಅವರಿಗೆ ಗುಂಡಿಕ್ಕದಿದ್ದರೆ ಇಂದು ಹಿಂದೂಸ್ತಾನ ಮಕ್ಕಾ- ಮದೀನಾದಲ್ಲಿ ನಮಾಜ್ ಓದುತ್ತಿರುತ್ತಿತ್ತು ಎಂದಿದ್ದಾರೆ.
ಭಾನುವಾರ ಗಾಂಧಿ ಜಯಂತಿಯಂದು ಜಬಲ್ಪುರ ಪ್ರವಾಸದಲ್ಲಿದ್ದ ಸಾಧ್ವಿ ಮಾಧ್ಯಮದವರೊಂದಿಗೆ ಮಾತನ್ನಾಡುತ್ತ, ಮಹಾತ್ಮಾ ಗಾಂಧಿ ನನ್ನ ಆದರ್ಶವಾಗಲು ಸಾಧ್ಯವೇ ಇಲ್ಲ. ಗಾಂಧಿ ಜಯಂತಿಯಂದು ನಾನು ಗೋಡ್ಸೆಗೆ ನಮಿಸುತ್ತೇನೆ ಎಂದರು. 
 
ಪಾಕಿಸ್ತಾನ ಸಮಸ್ಯೆಯ ಜನಕ ಗಾಂಧೀಜಿ. ಜವಾಹರಲಾಲ್ ನೆಹರು ಅವರನ್ನು ಪ್ರಧಾನಿಯಾಗಿಸಿ ಅದನ್ನು ಹುಟ್ಟುಹಾಕಿದವರವರು. ಅವರ ಈ ತಪ್ಪಿನಿಂದ ಸಾವಿರಾರು ಸೈನಿಕರು ಹುತಾತ್ಮರಾಗುತ್ತಿದ್ದಾರೆ. ನನ್ನ ಆದರ್ಶ ಗಾಂಧಿ ಅಲ್ಲ ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಎಂದಿದ್ದಾರೆ ಸಾಧ್ವಿ.
 
ಲಾಲ್ ಬಹಾದ್ದೂರ್ ಶಾಸ್ತ್ರಿ ಬಳಿಕ ಈ ದೇಶ ಕಂಡ ಅಸಾಮಾನ್ಯ ಪ್ರಧಾನಿ ಮೋದಿ ಎಂದ ಅವರು, ಮೋದಿ ದೇಶದ ಸೈನಿಕರ ಬಲಿದಾನಕ್ಕೆ ಪ್ರತೀಕಾರವನ್ನು ತೆಗೆದುಕೊಂಡರು ಎಂದು ಕೊಂಡಾಡಿದ್ದಾರೆ. 
 
ಪಾಕಿಸ್ತಾನದ ಕಲಾವಿದರು ಉಗ್ರರಲ್ಲ ಎಂಬ ಸಲ್ಮಾನ್ ಹೇಳಿಕೆಗೆ ಕಿಡಿಕಾರಿರುವ ವಿಹೆಚ್‌ಪಿ ನಾಯಕಿ ಸಾಧ್ವಿ ಪ್ರಾಚಿ, ಪಾಕ್ ಕಲಾವಿದರು ತಮ್ಮ ಕಲೆಯನ್ನು ತಮ್ಮ ದೇಶದಲ್ಲಿಯೇ ತೋರಿಸಿಕೊಳ್ಳಲಿ. ಈ ಕಲಾವಿದರ ಬಗ್ಗೆ ಸಲ್ಮಾನ್, ಶಾರುಖ್, ಅಮಿರ್ ಖಾನ್ ಸಹಿತ ಇತರ ಯಾರಿಗಾದರೂ ಸಹಾನುಭೂತಿ ಇದ್ದರೆ ಅವರು ಕೂಡ ಪಾಕಿಸ್ತಾನಕ್ಕೆ ಹೋಗಲಿ. ನಮ್ಮ ದೇಶದ ಅನ್ನ ತಿಂದು ಪಾಕಿಸ್ತಾನದ ಬಗ್ಗೆ ಅನುಕಂಪ ಸಲ್ಲದು ಎಂದು ಗುಡುಗಿದ್ದಾರೆ. 
 
ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಿರುವುದಕ್ಕೆ ಪ್ರತಿಕ್ರಿಯಿಸಿದ್ದ ಸಲ್ಮಾನ್ ಅವರು ಕಲಾವಿದರೇ ಹೊರತು ಭಯೋತ್ಪಾದಕರಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸಾಧ್ವಿ ಕಿಡಿಕಾರಿದ್ದಾರೆ. 
 
ನೆರೆ ರಾಷ್ಟ್ರದೊಂದಿಗೆ ಶಾಂತಿ, ಸೌಹಾರ್ದತೆಯಿಂದ ಇರಬೇಕು ಎಂಬುದೇನೋ ಸರಿಯಾದುದು. ಆದರೆ ನೆರೆಯ ದೇಶ ಹದ್ದುಮೀರಿ ವರ್ತಿಸಿದರೆ ಅದಕ್ಕೆ ತಕ್ಕ ಪಾಠ ಕಲಿಸಬೇಕಾದುದು ಕೂಡ ಅತ್ಯಗತ್ಯ. ಕೆಲವು ದೆವ್ವಗಳು ಮಾತಿಂದ ಅರ್ಥ ಮಾಡಿಕೊಳ್ಳುವುದಿಲ್ಲ. ಅವುಗಳಿಗೆ ಲತ್ತೆ ಪೆಟ್ಟು ಕೊಡಲೇಬೇಕಾಗುತ್ತದೆ ಎಂದಿದ್ದಾರೆ. 
 
ಪಾಕ್ ಕಲಾವಿದರು ಭಾರತಕ್ಕೆ ಬಂದು ಕಾರ್ಯಕ್ರಮವನ್ನು ನೀಡುವುದಕ್ಕೆ ಅನೇಕ ಹಿಂದೂ ಸಂಘಟನೆಗಳು ವಿರೋಧಿಸುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments