Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಎರಡೆರಡು ಡ್ಯಾಮೇಜ್ ತಂದಿಟ್ಟು ರಾಜೀನಾಮೆ ನೀಡಿದ ಸ್ಯಾಮ್ ಪಿತ್ರೋಡಾ

Krishnaveni K
ಗುರುವಾರ, 9 ಮೇ 2024 (08:31 IST)
ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ತಮ್ಮ ನಾಲಿಗೆ ಹರಿಯಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿತ್ತ ಪಕ್ಷದ ಸಾಗರೋತ್ತರ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಸ್ಯಾಮ್ ಪಿತ್ರೋಡಾ ನೀಡಿದ ಎರಡು ಹೇಳಿಕೆಗಳು ಕಾಂಗ್ರೆಸ್  ಗೆ ಭಾರೀ ಹಿನ್ನಡೆ ಉಂಟು ಮಾಡಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಯಾವುದೇ ರಾಜಕೀಯ ಪಕ್ಷದ ನಾಯಕರು ಅಪ್ಪಿ ತಪ್ಪಿ ಏನೇ ಮಾತನಾಡಿದರೂ ಅದರ ನೇರ ಪರಿಣಾಮವಾಗುವುದು ಪಕ್ಷದ ಮೇಲೆಯೇ.

ಸ್ಯಾಮ್ ಪಿತ್ರೋಡಾ ವಿಷಯದಲ್ಲೂ ಆಗಿದ್ದು ಅದೇ. ಅಲ್ಲೆಲ್ಲೋ ದೂರದ ಅಮೆರಿಕಾದಲ್ಲಿ ಕುಳಿತು ಬೇಕಾಬಿಟ್ಟಿ ಹೇಳಿಕೆ ನೀಡಿದರೂ ಇಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರ ಹೇಳಿಕೆಯಿಂದ ಭಾರೀ ಡ್ಯಾಮೇಜ್ ಆಗಿದೆ. ಪಿತ್ರಾರ್ಜಿತ ಆಸ್ತಿಗೆ ತೆರಿಗೆ ವಿಧಿಸಬೇಕು ಎಂಬ ಅವರ ಹೇಳಿಕೆ ಬಿಜೆಪಿಗೆ ಬ್ರಹ್ಮಾಸ್ತ್ರ ಸಿಕ್ಕಂತಾಗಿತ್ತು. ಕಾಂಗ್ರೆಸ್ ಬದುಕಿದ್ದಾಗ ಮಾತ್ರವಲ್ಲ, ಸತ್ತ ಮೇಲೂ ನಿಮ್ಮನ್ನು ಶೋಷಣೆ ಮಾಡುವುದನ್ನು ನಿಲ್ಲಿಸಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಈ ಡ್ಯಾಮೇಜ್ ಸರಿಪಡಿಸಲು ಹವಣಿಸುತ್ತಿರುವಾಗಲೇ ಸ್ಯಾಮ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದರು.

ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ, ಉತ್ತರ ಭಾರತೀಯರು ಚೀನಿಯರಂತೆ ಕಾಣುತ್ತಾರೆ, ಎಂದೆಲ್ಲಾ ಎಗ್ಗಿಲ್ಲದೇ ಮಾತನಾಡಿ ಮತ್ತೊಮ್ಮೆ ಕಾಂಗ್ರೆಸ್ ಗೆ ಸಂಕಷ್ಟ ತಂದಿದ್ದಾರೆ. ಸ್ಯಾಮ್ ಹೇಳಿಕೆಗೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮತ್ತೊಮ್ಮೆ ಕಾಂಗ್ರೆಸ್ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡು ಮುಜುಗರ ತಪ್ಪಿಸಲು ಯತ್ನಿಸಿದೆ. ಆದರೆ ಮನೆಯಲ್ಲಿ ಯಾರೇ ಒಬ್ಬರು ತಪ್ಪು ಮಾಡಿದರೂ ಅದರ ಪರಿಣಾಮ ಇಡೀ ಮನೆಗೆ ಎಂಬಂತೆ ಕಾಂಗ್ರೆಸ್ ಗೆ ಸ್ಯಾಮ್ ಹೇಳಿಕೆ ತೀವ್ರ ಸಂಕಷ್ಟ ತಂದೊಡ್ಡಿದೆ. ಪಕ್ಷಕ್ಕೆ ಎರಡೆರಡು ಬಾರಿ ಡ್ಯಾಮೇಜ್ ತಂದಿಟ್ಟ ಪಿತ್ರೋಡಾ ಈಗ ಕಾಂಗ್ರೆಸ್ ಸಾಗರೋತ್ತರ ವಿಭಾಗದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments