Webdunia - Bharat's app for daily news and videos

Install App

ಶಾರದಾ ಚಿಟ್ ಫಂಡ್ ಪ್ರಕರಣ: ನಳಿನಿ ಚಿದಂಬರಂಗೆ ಸಮನ್ಸ್

Webdunia
ಬುಧವಾರ, 24 ಆಗಸ್ಟ್ 2016 (17:17 IST)
ಶಾರದಾ ಚಿಟ್ ಫಂಡ್ ಪ್ರಕರಣದಲ್ಲಿ ಹಣ ವಂಚನೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಮ್ ಅವರ ಪತ್ನಿ ನಳಿನಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 

ಮುಂದಿನ ತಿಂಗಳ ಆರಂಭದಲ್ಲಿ ಕೋಲ್ಕತ್ತಾದಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ನಳಿನಿ ಅವರಿಗೆ ಸೂಚನೆ ನೀಡಲಾಗಿದ್ದು, ಪಿಎಮ್ಎಲ್ಎ (Prevention of Money Laundering Act) ಕಾನೂನಿನಡಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವ ಸಾಧ್ಯತೆಗಳಿವೆ. 
 
ಈ ಹಿಂದೆ ಕೂಡ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ನಳಿನಿಯವರನ್ನು ಪ್ರಶ್ನಿಸಿತ್ತು. ಆದರೆ ಈಗ ಸಿಕ್ಕಿರುವ ಹೊಸ ಸಾಕ್ಷ್ಯಗಳ ಆಧಾರದ ಮೇಲೆ ಅವರಿಗೆ ಸಮನ್ಸ್ ನೀಡಲಾಗಿದೆ. 
 
ಶಾರದಾ ಚಿಟ್ ಫಂಡ್ ಸಂಸ್ಥೆ ನಳಿನಿ ಅವರಿಗೆ ನೀಡಿರುವ ಲೀಗಲ್ ಫೀ ಕುರಿತು ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
 
ಈ ಹಿಂದೆ ಕೂಡ ಪ್ರಕರಣ ಸಂಬಂಧ ನಳಿನಿ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಕಾಂಗ್ರೆಸ್‌ ನಾಯಕ ಮಂತಾಂಗ್ ಸಿನ್ಹಾ ಅವರ ಪರಿತ್ಯಕ್ತ ಪತ್ನಿ ಮನೋರಂಜನ್‌ ಸಿನ್ಹಾ ಅವರ ಕೋರಿಕೆ ಮೇರೆಗೆ ನಲಿನಿ ಅವರನ್ನು ಶಾರದಾ ಸಂಸ್ಥೆಯ ವಕೀಲೆಯನ್ನಾಗಿ ನೇಮಕ ಮಾಡಿಕೊಳ್ಳಲಾಗಿತ್ತು ಎಂದು ಸದ್ಯ ಜೈಲಿನಲ್ಲಿರುವ ಶಾರದಾ ಮುಖ್ಯಸ್ಥ ಸುದಿಪ್ತ್ ಸೇನ್ ಅವರು ಈ ಹಿಂದೆ ತಿಳಿಸಿದ್ದರು. 
 
ಕಾಂಗ್ರೆಸ್ ನಾಯಕ ಮಂತಾಂಗ್ ಸಿನ್ಹಾ ಅವರ ಪರಿತ್ಯಕ್ತ ಪತ್ನಿ ಮನೋರಂಜನಾ ಸಿಂಗ್ ಅವರ ಕೋರಿಕೆಯ ಮೇರೆಗೆ ನಳಿನಿ ಅವರನ್ನು ತಮ್ಮ ಸಂಸ್ಥೆಯ ವಕೀಲೆಯನ್ನಾಗಿ ನೇಮಿಸಲಾಗಿತ್ತು ಎಂದು ಶಾರದಾ ಚಿಟ್ ಫಂಡ್ ಮುಖ್ಯಸ್ಥರಾದ ಸುದಿಪ್ತಾ ಸೇನ್ ವಿಚಾರಣೆ ಸಂದರ್ಭದಲ್ಲಿ ಹೇಳಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments