Webdunia - Bharat's app for daily news and videos

Install App

ಎಐಎಡಿಎಂಕೆ ಪಕ್ಷದಿಂದ ಶಶಿಕಲಾ, ದಿನಕರನ್ ವಜಾ

Webdunia
ಸೋಮವಾರ, 28 ಆಗಸ್ಟ್ 2017 (14:08 IST)
ತಮಿಳುನಾಡಿನಲ್ಲಿ ಇಂದು ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಎಐಎಡಿಎಂಕೆ ಪಕ್ಷದಿಂದ ವಿ.ಕೆ. ಶಶಿಕಲಾ ಮತ್ತು ಟಿಟಿವಿ ದಿನಕರನ್ ಅವರನ್ನು ಸಿಎಂ ಪಳನಿಸ್ವಾಮಿ ನೇತೃತ್ವದ ಸಭೆಯಲ್ಲಿ ವಜಾಗೊಳಿಸಲಾಗಿದೆ.
ಇಂದು ಎಐಎಡಿಎಂಕೆ ಕಚೇರಿಯಲ್ಲಿ ಸಿಎಂ ಪಳನಿಸ್ವಾಮಿ ನೇತೃತ್ವದಲ್ಲಿ ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತಂತೆ ಚರ್ಚಿಸಲು ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಶಶಿಕಲಾ ಮತ್ತು ದಿನಕರನ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ವಜಾಗೊಳಿಸಲಾಯಿತು.
 
ಕೆಲ ದಿನಗಳ ಹಿಂದೆ ಸಿಎಂ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಬಣಗಳು ಒಂದಾಗಿದ್ದವು. ಕೆಲ ದಿನಗಳಲ್ಲಿ ಪಕ್ಷದಿಂದ ಶಶಿಕಲಾ ಮತ್ತು ದಿನಕರನ್ ಅವರನ್ನು ಉಚ್ಚಾಟಿಸಬೇಕು ಎನ್ನುವ ಷರತ್ತು ಇಡಲಾಗಿತ್ತು. ಅದರಂತೆ, ಇಂದು ಶಶಿಕಲಾ ಮತ್ತು ದಿನಕರನ್‌ಗೆ ಗೇಟ್ ಪಾಸ್ ನೀಡಲಾಗಿದೆ.
 
ಮತ್ತೊಂದೆಡೆ ಟಿಟಿವಿ ದಿನಕರನ್ ಪ್ರತ್ಯೇಕ ಸಭೆ ಕರೆದಿದ್ದು 21 ಎಐಎಡಿಎಂಕೆ ಶಾಸಕರು ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments