Webdunia - Bharat's app for daily news and videos

Install App

ಎಐಎಡಿಎಂಕೆ ಪಕ್ಷದಿಂದ ಶಶಿಕಲಾ, ದಿನಕರನ್ ವಜಾ

Webdunia
ಸೋಮವಾರ, 28 ಆಗಸ್ಟ್ 2017 (14:08 IST)
ತಮಿಳುನಾಡಿನಲ್ಲಿ ಇಂದು ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಎಐಎಡಿಎಂಕೆ ಪಕ್ಷದಿಂದ ವಿ.ಕೆ. ಶಶಿಕಲಾ ಮತ್ತು ಟಿಟಿವಿ ದಿನಕರನ್ ಅವರನ್ನು ಸಿಎಂ ಪಳನಿಸ್ವಾಮಿ ನೇತೃತ್ವದ ಸಭೆಯಲ್ಲಿ ವಜಾಗೊಳಿಸಲಾಗಿದೆ.
ಇಂದು ಎಐಎಡಿಎಂಕೆ ಕಚೇರಿಯಲ್ಲಿ ಸಿಎಂ ಪಳನಿಸ್ವಾಮಿ ನೇತೃತ್ವದಲ್ಲಿ ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತಂತೆ ಚರ್ಚಿಸಲು ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಶಶಿಕಲಾ ಮತ್ತು ದಿನಕರನ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ವಜಾಗೊಳಿಸಲಾಯಿತು.
 
ಕೆಲ ದಿನಗಳ ಹಿಂದೆ ಸಿಎಂ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಬಣಗಳು ಒಂದಾಗಿದ್ದವು. ಕೆಲ ದಿನಗಳಲ್ಲಿ ಪಕ್ಷದಿಂದ ಶಶಿಕಲಾ ಮತ್ತು ದಿನಕರನ್ ಅವರನ್ನು ಉಚ್ಚಾಟಿಸಬೇಕು ಎನ್ನುವ ಷರತ್ತು ಇಡಲಾಗಿತ್ತು. ಅದರಂತೆ, ಇಂದು ಶಶಿಕಲಾ ಮತ್ತು ದಿನಕರನ್‌ಗೆ ಗೇಟ್ ಪಾಸ್ ನೀಡಲಾಗಿದೆ.
 
ಮತ್ತೊಂದೆಡೆ ಟಿಟಿವಿ ದಿನಕರನ್ ಪ್ರತ್ಯೇಕ ಸಭೆ ಕರೆದಿದ್ದು 21 ಎಐಎಡಿಎಂಕೆ ಶಾಸಕರು ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments