Webdunia - Bharat's app for daily news and videos

Install App

ಕಿವುಡ ಮಕ್ಕಳಿಗೆ ಶ್ರವಣ ಸಾಧನ ದೇಣಿಗೆ: ಆದರೆ ಹಣವನ್ನೇ ಪಾವತಿಸದ ಶಶಿಕಲಾ

Webdunia
ಶನಿವಾರ, 8 ಜುಲೈ 2017 (19:46 IST)
ಚೆನ್ನೈ:ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಜೈಲುಪಾಲಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಪಕ್ಷದ ಸಂಸ್ಥಾಪಕ ಎಂ ಜಿ ರಾಮಚಂದ್ರನ್ ಅವರ 100ನೇ ಜನ್ಮದಿನಾಚರಣೆ ಅಂಗವಾಗಿ ಜನವರಿ 17ರಂದು ಡಾ. ಎಂ ಜಿಆರ್ ಶಾಲೆಯ ಮೂಕ ಮತ್ತು ಕಿವುಡ ಮಕ್ಕಳಿಗಾಗಿ ಶ್ರವಣ ಸಾಧನಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಆದರೆ ಈ ಸಾಧನಗಳನ್ನು ಖರೀದಿಸಿದ ಕಂಪನಿಗೆ ಈವರೆಗೂ ಯಾವುದೇ ಹಣ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.
 
ಈ ಕುರಿತು ಸ್ವತ; ಕಂಪನಿಯ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶ್ರವಣ ಸಾಧನಗಳನ್ನು ತೆಗೆದುಕೊಂಡು ಹೋಗಿ ಸುಮಾರು 6 ತಿಂಗಳುಗಳು ಕಳೆದಿವೆಯಾದರೂ ಈ ವರೆಗೂ ಯಾವುದೇ ಹಣವನ್ನು ನೀಡಿಲ್ಲ ಎಂದಿದ್ದಾರೆ. ವಾಕ್ ಮತ್ತು ಶ್ರವಣ ಸಮಸ್ಯೆಯಿರುವ ಮಕ್ಕಳಿಗಾಗಿ ನಮ್ಮ ಕಂಪನಿಯಿಂದ ಸಾಧನಗಳನ್ನು ನೀಡಿದ್ದೇವೆ. ಅದರೆ ಈವರೆಗೆ ಶಶಿಕಲಾರಿಂದ ಯಾವುದೇ ಹಣ ಪಾವತಿಯಾಗಿಲ್ಲ ಎಂದು ದೂರಿದ್ದಾರೆ.
 
ಮಕ್ಕಳಿಗೆ 245 ಶ್ರವಣ ಸಾಧನದ ಕಿಟ್ ಗಳನ್ನು ನೀಡಲಾಗಿದ್ದು, ಒಟ್ಟು 18.13 ಲಕ್ಷ ರೂ ವೆಚ್ಚವಾಗಿದೆ. ಒಂದು ಕಿಟ್ ನ ಬೆಲೆ 7,400 ರೂ ಆಗಿದೆ. ಈ ಸಾಧನಗಳೆಲ್ಲವೂ ಹ್ಯಾನ್ಸಾಟನ್ ಮತ್ತು ರೆಕ್ಸ್ಟನ್ ಎಂಬ ಬ್ರ್ಯಾಂಡೆಡ್ ಕಂಪನಿಯ ಸಾಧನಗಳಾಗಿವೆ.
 
ಇನ್ನೊಂದು ವಿಚಾರವೇನೆಂದರೆ ಶಶಿಕಲಾ ಕಡೆಯಿಂದ ಇದೇ ಶಾಲೆಗೆ 10 ಲಕ್ಷ ರೂ ಗಳ ಚೆಕ್ ನೀಡಲಾಗಿದೆ. ಅದರೆ ಈ ಚೆಕ್ ನಲ್ಲಿನ ಸಹಿ ಹೋಲಿಕೆಯಾಗದೇ ಚೆಕ್ ಬೌನ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇದಾವುದರ ಕುರಿತಾಗಿಯೂ ಶಾಲಾ ಆಡಳಿತ ಮಂಡಳಿಯಿಂದ ಯಾವುದೇ ಪ್ರತಿಕ್ರಿಯೆಗಳೂ ಲಭ್ಯವಾಗಿಲ್ಲ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments