Webdunia - Bharat's app for daily news and videos

Install App

ರಾಜಕೀಯಕ್ಕೆ ದಿಡೀರ್ ನಿವೃತ್ತಿ ಘೋಷಿಸಿದ ಚಿನ್ನಮ್ಮ ಶಶಿಕಲಾ

Webdunia
ಗುರುವಾರ, 4 ಮಾರ್ಚ್ 2021 (09:13 IST)
ಚೆನ್ನೈ: ಎಐಡಿಎಂಕೆಗೆ ಬಿಸಿ ತುಪ್ಪವಾಗಿದ್ದ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ರಾಜಕೀಯಕ್ಕೆ ದಿಡೀರ್ ಆಗಿ ನಿವೃತ್ತಿ ಘೋಷಿಸಿದ್ದಾರೆ.


ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಮುಗಿಸಿ ತಮಿಳುನಾಡು ಚುನಾವಣೆ ಹೊಸ್ತಿಲಲ್ಲೇ ತವರಿಗೆ ಎಂಟ್ರಿ ಕೊಟ್ಟಿದ್ದ ಚಿನ್ನಮ್ಮ ಎಐಡಿಎಂಕೆ ಪಾಲಿಗೆ ಬಿಸಿ ತುಪ್ಪವಾಗಿದ್ದರು. ಮತ್ತೆ ಪಕ್ಷಕ್ಕೆ ಮರಳಲು ಹರಸಾಹಸ ಮಾಡಿದ್ದರು.

ಆದರೆ ಇದೀಗ ಇದ್ದಕ್ಕಿದ್ದಂತೆ ಸಕ್ರಿಯ ರಾಜಕೀಯದಿಂದ ದೂರವುಳಿಯುವ ನಿರ್ಧಾರ ಪ್ರಕಟಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಅತ್ತ ಪಕ್ಷದ ವಿರುದ್ಧವೇ ಬಂಡಾಯವೆದ್ದು ಚುನಾವಣೆ ಹೊಸ್ತಲಲ್ಲಿ ತಲೆನೋವಾಗಲಿದ್ದ ಶಶಿಕಲಾ ನಿವೃತ್ತಿ ಘೋಷಿಸಿರುವುದು ಎಐಡಿಎಂಕೆಗೆ ನಿರಾಳ ಉಂಟುಮಾಡಿದೆ.

ಜಯಲಲಿತಾ ಬದುಕಿದ್ದಾಗಲೂ ನಾನು ಅಧಿಕಾರಕ್ಕಾಗಿ ಆಸೆಪಟ್ಟವಳಲ್ಲ. ಎಐಡಿಎಂಕೆ ಈ ಚುನಾವಣೆಯಲ್ಲಿ ಡಿಎಂಕೆಯನ್ನು ಸೋಲಿಸಿ ಮತ್ತೆ ಅಧಿಕಾರಕ್ಕೆ ಬರುವುದಷ್ಟೇ ನನ್ನ ಉದ್ದೇಶ. ಎಲ್ಲರೂ ಡಿಎಂಕೆಯನ್ನು ಸೋಲಿಸಲು ಕೈ ಜೋಡಿಸೋಣ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments