ಶಶಿಕಲಾ ದಂಡ ಪಾವತಿಸದಿದ್ರೆ ಹೆಚ್ಚುವರಿಯಾಗಿ 13 ತಿಂಗಳ ಜೈಲುವಾಸ

Webdunia
ಮಂಗಳವಾರ, 21 ಫೆಬ್ರವರಿ 2017 (16:03 IST)
ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ನಾಲ್ಕು ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ, ಸುಪ್ರೀಂಕೋರ್ಟ್ ವಿಧಿಸಿರುವ 10 ಕೋಟಿ ರೂ. ದಂಡ ಪಾವತಿಸುವಲ್ಲಿ ವಿಫಲವಾದಲ್ಲಿ ಹೆಚ್ಚುವರಿಯಾಗಿ 13 ತಿಂಗಳುಗಳ ಕಾಲ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. 
 
ಜೈಲಿನ ಮುಖ್ಯ ಅಧಿಕಾರಿ ಕೃಷ್ಣ ಕುಮಾರ್ ಹೇಳಿಕೆಯೊಂದನ್ನು ನೀಡಿ, ಒಂದು ವೇಳೆ ಶಶಿಕಲಾ ನಟರಾಜನ್, ಸುಪ್ರೀಂಕೋರ್ಟ್ ಹೇರಿರುವ 10 ಕೋಟಿ ರೂಪಾಯಿ ದಂಡ ಪಾವತಿಸದಿದ್ದಲ್ಲಿ, ಮತ್ತೆ 13 ತಿಂಗಳು ಕಾಲ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
 
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ,ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
 
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಫೆಬ್ರವರಿ 14 ರಂದು, ಶಶಿಕಲಾ ಮತ್ತು ಅವರ ಸಹಚರರಿಗೆ ನಾಲ್ಕು ವರ್ಷಗಳ ಶಿಕ್ಷೆ  ಮತ್ತು 10 ಕೋಟಿ ರೂ, ದಂಡ ವಿಧಿಸಿ ತೀರ್ಪು ನೀಡಿತ್ತು.
 
ವಿಚಾರಣಾ ನ್ಯಾಯಾಲಯದಲ್ಲಿ ಅಪರಾಧಿಯಾಗಿರುವ ಶಶಿಕಲಾ ಈಗಾಗಲೇ 21 ದಿನಗಳ ಶಿಕ್ಷೆಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದರಿಂದ, ಇದೀಗ 3 ವರ್ಷ 11 ತಿಂಗಳು ಕಾಲ ಶಿಕ್ಷೆಯನ್ನು ಅನುಭವಿಸಬೇಕಾಗಿ ಬಂದಿದೆ.
 
ಅಪರಾಧಿಗಳಾದ ಶಶಿಕಲಾ, ಇಳವರಸಿ ಮತ್ತು ಸುಧಾಕರನ್‌ರನ್ನು ಸಾಮಾನ್ಯ ಕೈದಿಯಂತೆ ಪರಿಗಣಿಸಲಾಗುತ್ತಿತ್ತು ಯಾವುದೇ ವಿಐಪಿ ಆತಿಥ್ಯ ನೀಡುತ್ತಿಲ್ಲ ಎಂದು ಕುಮಾರ್ ಸ್ಪಷ್ಟಪಡಿಸಿದ್ದಾರೆ.  
 
ಭಧ್ರತಾ ಕಾರಣಗಳಿಂದಾಗಿ ಶಶಿಕಲಾ ಮತ್ತು ಇಳರಸಿಯನ್ನ ಒಂದೇ ಸೆಲ್‌ನಲ್ಲಿಡಲಾಗಿದೆ ಎಂದು ಜೈಲು ಸೂಪರಿಟೆಂಡೆಂಟ್ ಕೃಷ್ಣ ಕುಮಾರ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments