Webdunia - Bharat's app for daily news and videos

Install App

ಸೌದಿಯಲ್ಲಿ ಮನೆಸೇವಕಿಯ ಕೈ ಕತ್ತರಿಸಿದ ಘಟನೆ: ಸ್ವತಂತ್ರ ತನಿಖೆಗೆ ಭಾರತದ ಕರೆ

Webdunia
ಶುಕ್ರವಾರ, 9 ಅಕ್ಟೋಬರ್ 2015 (17:04 IST)
ಭಾರತೀಯ ಮಹಿಳೆಯ ಕೈಯನ್ನು ಸೌದಿಯ  ಮಾಲೀಕಳು  ಕತ್ತರಿಸಿದ ಆಘಾತಕಾರಿ ಘಟನೆ ಬಗ್ಗೆ ವಿದೇಶಾಂಗ ವ್ಯವಹಾರ ಸಚಿವಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಘಟನೆ ವಿರುದ್ಧ ಸ್ವತಂತ್ರ ತನಿಖೆ ನಡೆಸಬೇಕು ಮತ್ತು ಆರೋಪಿ ವಿರುದ್ಧ ಹತ್ಯೆ ಪ್ರಯತ್ನದ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದೆ. ರಿಯಾದ್‌ನಲ್ಲಿ ಭಾರತೀಯ ರಾಯಭಾರಿ ಕಚೇರಿ ಸಕ್ರಿಯವಾಗಿ ಈ ವಿಷಯ ಕುರಿತು ಸೌದಿ ಅಧಿಕಾರಿಗಳ ಜತೆ ವಿಚಾರವಿನಿಮಯ ನಡೆಸುತ್ತಿದೆ ಎಂದು ಎಂಇಎ ಅಧಿಕೃತ ವಕ್ತಾರ ವಿಕಾಸ್ ಸ್ವರೂಪ್ ಹೇಳಿದರು. 
 
ನಾವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ನಾವು ಈ ವಿಷಯ ಎತ್ತಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದೇವೆ ಎಂದು ಹೇಳಿದ ಅವರು ಪೊಲೀಸ್ ಮುಖ್ಯಸ್ಥರು ಈ ಘಟನೆಯ ಬಗ್ಗೆ ಶೀಘ್ರ ತನಿಖೆಗೆ ಭರವಸೆ ನೀಡಿದ್ದಾರೆ.

 ಎಂಇಎ ಮತ್ತು ರಿಯಾದ್‌ನಲ್ಲಿ ಭಾರತೀಯ ರಾಯಭಾರಿ ಕಚೇರಿ ದುರ್ದೈವಿಯ ಸ್ಥಿತಿಯ ಬಗ್ಗೆ ನಿಗಾವಹಿಸಿದೆ. ಸೌದಿಯ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮನೆಸೇವಕಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಮನೆಯ ಒಡತಿ ಅವಳ ಬಲಗೈಯನ್ನು ಕತ್ತರಿಸಿದ್ದರಿಂದ ಅವಳು ಕುಸಿದುಬಿದ್ದಿದ್ದಳು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments