Webdunia - Bharat's app for daily news and videos

Install App

ಸಹಖೈದಿ ಸಾವು: ಕೋರ್ಟ್ ನಲ್ಲಿ ಇಂದ್ರಾಣಿ ಮುಖರ್ಜಿ ಹೇಳಿದ್ದೇನು?

Webdunia
ಬುಧವಾರ, 28 ಜೂನ್ 2017 (16:21 IST)
ಮುಂಬೈ:ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಇಂದ್ರಾಣಿ ಮುಖರ್ಜಿ ಜೈಲಿನ ತನ್ನ  ಸಹಖೈದಿ ಮಂಜುಳಾ ಶೆಟ್ಟಿ ಕುತ್ತಿಗೆಗೆ ಸೀರೆ ಹಾಕಿ ಜೈಲು ಅಧೀಕ್ಷಕರ ಕೊಠಡಿಯಿಂದ ಎಳೆದೊಯ್ಯುತ್ತಿರುವುದನ್ನು ತಾನು ನೋಡಿರುವುದಾಗಿ ಕೋರ್ಟ್ ಗೆ ತಿಳಿಸಿದ್ದಾರೆ.
 
ಮುಂಬೈನ ಬೈಕುಲಾ ಜೈಲಿನಲ್ಲಿ ನಡೆದ ಗಲಭೆಯ ವೇಳೆ ಮಹಿಳಾ ಜೈಲು ಅಧಿಕಾರಿಗಳ ಹಲ್ಲೆಯಿಂದಾಗಿ ಇಂದ್ರಾಣಿ ಸಹಖೈದಿ ಮಂಜುಳಾ ಮೃತಪಟ್ಟಿದ್ದಾರೆ. ಅಲ್ಲದೆ ಮೃತ ಮಹಿಳಾ ಖೈದಿಗೆ ಲೈಂಗಿಕ ಕಿರುಕುಳ ನೀಡಿ ಅಮಾನುಷವಾಗಿ ಹತ್ಯೆಮಾಡಲಾಗಿದೆ ಎಂದು ಆರೋಪಿಸಲಾಗಿದೆ.
 
ಈ ಸಂಬಂಧ ಮುಂಬೈ ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದಿರುವ ಇಂದ್ರಾಣಿ ಮುಖರ್ಜಿ, ಜೈಲಿನ ಸಿಬ್ಬಂದಿ ಮಂಜುಳಾ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನಾನು ಮತ್ತು ಇತರೆ ಖೈದಿಗಳು ಬಾಗಿಲಿನ ರಂಧ್ರದ ಮೂಲಕ ನೋಡಿದ್ದೇವೆ. ಆದರೆ ಇದನ್ನು ಕೋರ್ಟ್ ನಲ್ಲಿ ಹೇಳಿದರೆ ನೀವು ಅದೇ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಜೈಲು ಸಿಬ್ಬಂದಿ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ. ಮಹಿಳಾ ಖೈದಿ ಸಾವಿಗೆ ತನ್ನ ಕಕ್ಷಿದಾರೆ ಇಂದ್ರಾಣಿ ಮುಖರ್ಜಿ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಈ ಸಂಬಂಧ ಕೋರ್ಟ್ ನಲ್ಲಿ ಹೇಳಿಕೆ ನೀಡಲು ಬಯಸಿದ್ದಾರೆ ಎಂದು ಇಂದ್ರಾಣಿ ಪರ ವಕೀಲ ಗುಂಜನ್ ಮಂಗಲಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಇಂದ್ರಾಣಿ ಮುಖರ್ಜಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ