Select Your Language

Notifications

webdunia
webdunia
webdunia
webdunia

ಕೇಂದ್ರ ಬಿಜೆಪಿ ಸಚಿವರ ಪುತ್ರನ ಜಾಮೀನು ವಜಾ: ವಾರದೊಳಗೆ ಶರಣಾಗುವಂತೆ ಸೂಚನೆ!

ಕೇಂದ್ರ ಬಿಜೆಪಿ ಸಚಿವರ ಪುತ್ರನ ಜಾಮೀನು ವಜಾ: ವಾರದೊಳಗೆ ಶರಣಾಗುವಂತೆ ಸೂಚನೆ!
bengaluru , ಸೋಮವಾರ, 18 ಏಪ್ರಿಲ್ 2022 (14:07 IST)

ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಟೇನಿ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.

ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ, ಆಶಿಶ್‌ ಮಿಶ್ರಾಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿತ್ತು.

ಅಲಹಾಬಾದ್ ಹೈಕೋರ್ಟ್ ಹಲವು ಅಪ್ರಸ್ತುತ ಅಂಶಗಳನ್ನು ಪರಿಗಣಿಸಿ ಅರ್ಜಿದಾರರ ಅಂಶಗಳನ್ನು ಪರಿಗಣಿಸದೆ ಜಾನೀನು ನೀಡಿದೆ ಎಂದು ಅಭಿಪ್ರಾಯಪಟ್ಟ ಸುಪ್ರೀಂಕೋರ್ಟ್‌, ಒಂದು ವಾರದೊಳಗೆ ಶರಣಾಗುವಂತೆ ಆಶಿಶ್‌ ಮಿಶ್ರಾಗೆ ಸೂಚಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಚೀಲದಲ್ಲಿ ನವಜಾತ ಶಿಶು ಪತ್ತೆ!