Webdunia - Bharat's app for daily news and videos

Install App

ಸುಪ್ರೀಂಗೆ ಕಾವೇರಿ ನ್ಯಾಯ ಮಂಡಳಿ ರಚನೆ ಆದೇಶ ನೀಡುವ ಅಧಿಕಾರವಿಲ್ಲ: ಕೇಂದ್ರ

Webdunia
ಸೋಮವಾರ, 3 ಅಕ್ಟೋಬರ್ 2016 (17:03 IST)
ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನಿರ್ದೇಶನ ನೀಡುವ ಅಧಿಕಾರ ಸುಪ್ರೀಂಕೋರ್ಟ್‌ಗೆ ಇಲ್ಲ ಎಂದು ಕೇಂದ್ರ ಮಾರ್ಪಾಡು ಅರ್ಜಿ ಸಲ್ಲಿಸಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಜ್ಯದ ಪರ ನಿಂತಿರುವ ಕೇಂದ್ರ ಸರ್ಕಾರ, ಮಂಡಳಿ ರಚನೆ ಆದೇಶ ನೀಡುವುದು ನಿಮ್ಮ ವ್ಯಾಪ್ತಿಯಲ್ಲಿ ಇಲ್ಲ. ಈ ಆದೇಶವನ್ನು ಪಾಲಿಸಲು ಹೋದರೆ ಮತ್ತೊಂದು ಸಮಸ್ಯೆ ಉದ್ಭವವಾಗುತ್ತದೆ ಎಂದು ಸುಪ್ರೀಂಗೆ ಹೇಳಿದೆ.
 
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ಮತ್ತು ಕಾವೇರಿ ನ್ಯಾಯ ಮಂಡಳಿ ರಚನೆ ಆದೇಶ 2012ರ ರಾಷ್ಟ್ರೀಯ ಜಲ ನೀತಿಯ ಉಲ್ಲಂಘನೆಗೆ ಕಾರಣವಾಗುತ್ತದೆ. ಈ ವಿಧಿಯ ಪ್ರಕಾರ ತಮಿಳುನಾಡಿಗೆ ಕೃಷಿಗೆ ನೀರು ಒದಗಿಸುವುದಕ್ಕಿಂತ ಮೊದಲು ಕರ್ನಾಟಕಕ್ಕೆ ಕುಡಿಯುವ ನೀರಿನ ಪೂರೈಕೆಗೆ ಪ್ರಾಧಾನ್ಯತೆ ನೀಡಬೇಕು ಎಂದು ಹೇಳುತ್ತದೆ ಎಂದು ಶನಿವಾರ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಕೂಡ ಕರ್ನಾಟಕದ ಪರ ನಿಂತಿದೆ. 
 
ಸೆಪ್ಟೆಂಬರ್ 30 ರಂದು ನಡೆದ ವಿಚಾರಣೆಯಲ್ಲಿ ಕೇವಲ ನಾಲ್ಕು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿತ್ತು. ಅದಕ್ಕೆ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಕೂಡಲೇ ಒಪ್ಪಿಗೆ ಸೂಚಿಸಿದ್ದರು.
 
ಆದರೆ ಅಂದು ತನ್ನಿಂದ ತಪ್ಪಾಗಿತ್ತು. ಸಂವಿಧಾನದ ಅಂತರ್ ರಾಜ್ಯ ಜಲ ವಿವಾದ ಕಾಯಿದೆ ಪ್ರಕಾರ ಸಂಸತ್‌ನ ಉಭಯ ಸದನಗಳು ಅನುಮೋದನೆ ನೀಡದೇ ನಿರ್ವಹಣಾ ಮಂಡಳಿಯನ್ನು ರಚನೆ ಮಾಡುವಂತೆ ಇಲ್ಲ. ಜತೆಗೆ ಅಂತರ್ ರಾಜ್ಯ ಜಲವಿವಾದವನ್ನು ಬಗೆ ಹರಿಸಲು ನಿಮಗೆ ಯಾವುದೇ ಅಧಿಕಾರ ಇಲ್ಲ ಎಂದು ಅಟಾರ್ನಿ ಜನರಲ್ ಇಂದು ಸುಪ್ರೀಂ ಮುಂದೆ ಹೇಳಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments