ವಿದ್ಯುತ್ ಕ್ಷಾಮದಿಂದಾಗಿ ಉಚಿತ ವಿದ್ಯುತ್ ಯೋಜನೆಗೇ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರ

Krishnaveni K
ಭಾನುವಾರ, 14 ಜುಲೈ 2024 (08:03 IST)
ಹಿಮಾಚಲಪ್ರದೇಶ: ಉಚಿತ ಘೋಷಣೆಯೊಂದಿಗೆ ಅಧಿಕಾರಕ್ಕೆ ಬಂದ ಹಿಮಾಚಲಪ್ರದೇಶ ಕಾಂಗ್ರೆಸ್ ಸರ್ಕಾರ ಈಗ ಭಾರೀ ವಿದ್ಯುತ್ ಕ್ಷಾಮ ಎದುರಿಸುತ್ತಿದ್ದು ಉಚಿತ ವಿದ್ಯುತ್ ಯೋಜನೆಗೆ ಕತ್ತರಿ ಹಾಕಿದೆ.

ಕರ್ನಾಟಕದಂತೇ ಹಿಮಾಚಲ ಪ್ರದೇಶದಲ್ಲೂ ಉಚಿತ ವಿದ್ಯುತ್ ಘೋಷಣೆ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ ಈಗ ವಿದ್ಯತ್ ಕ್ಷಾಮ ಎದುರಾಗಿದ್ದು, ದಿಕ್ಕೇ ತೋಚದ ಸರ್ಕಾರ ಉಚಿತ ವಿದ್ಯುತ್ ಯೋಜನೆಗೇ ಕತ್ತರಿ ಹಾಕಿದೆ. ಆದಾಯ ತೆರಿಗೆ ಪಾವತಿಸುವವರಿಗೆ ಉಚಿತ ವಿದ್ಯುತ್ ಇಲ್ಲ ಎಂಬ ಹೊಸ ನಿಯಮ ಜಾರಿಗೆ ತಂದಿದೆ.

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಿಪಿಎಲ್ ಕಾರ್ಡ್ ಮತ್ತು ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಮಾತ್ರ ತಿಂಗಳಿಗೆ 125 ಯೂನಿಟ್ ಉಚಿತ ವಿದ್ಯುತ್ ಸಿಗಲಿದೆ. ಅಲ್ಲದೆ, ಒಂದು ಕುಟುಂಬದಿಂದ ಒಂದು ಮೀಟರ್ ಗೆ ಮಾತ್ರ ಉಚಿತ ವಿದ್ಯುತ್ ಸಿಗಲಿದೆ.

ಉಚಿತ ವಿದ್ಯುತ್ ಪಡೆಯುವವರ ಆಧಾರ್ ನಂಬರ್ ಜೊತೆಗೆ ಪಡಿತರ ಸಂಖ್ಯೆಯನ್ನು ಲಿಂಕ ಮಾಡಲಾಗುತ್ತದೆ. ರಾಜ್ಯದಲ್ಲಿರುವ ಅರ್ಧಕ್ಕರ್ಧ ಜನ ಉಚಿತ ವಿದ್ಯುತ್ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇದರಿಂದ ರಾಜ್ಯ ಸರ್ಕಾರ ಈ ಹಣಕಾಸು ವರ್ಷದಲ್ಲಿ 1,800 ಕೋಟಿ ರೂ. ನಷ್ಟ ಅನುಭವಿಸಿದೆ. ರಾಜ್ಯದ ಒಟ್ಟಾರೆ ಸಾಲ 85,000 ಕೋಟಿ ದಾಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments