Webdunia - Bharat's app for daily news and videos

Install App

ಲಡಾಖ್‌ನಲ್ಲಿ ಕಮರಿಗೆ ಉರುಳಿದ ಶಾಲಾ ಬಸ್‌: 7 ಮಂದಿ ಸ್ಥಳದಲ್ಲೇ ದುರ್ಮರಣ, ಸಾವು ಬದುಕಿನ ಮಧ್ಯೆ 20ಮಂದಿ

Sampriya
ಗುರುವಾರ, 22 ಆಗಸ್ಟ್ 2024 (20:26 IST)
Photo Courtesy X
ಲೇಹ್: ಲಡಾಖ್‌ನ ದುರ್ಬುಕ್ ಬಳಿ ಗುರುವಾರ 27 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಮರಿಗೆ ಬಿದ್ದ ಪರಿಣಾಮ ಏಳು ಜನರು ಸಾವನ್ನಪ್ಪಿ, 20 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಭಾರತೀಯ ಸೇನೆಯ ಅಧಿಕಾರಿಗಳ ಪ್ರಕಾರ, "ಇಂದು 27 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ನ ನಿಯಂತ್ರಣ ತಪ್ಪಿ ಲಡಾಖ್‌ನ ದುರ್ಬುಕ್ ಬಳಿ ಸುಮಾರು 5 ಕಿ.ಮೀ ದೂರದ ಕಮರಿಯಲ್ಲಿ ಬಿದ್ದಿದೆ. ಅಪಘಾತವನ್ನು ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ಸೈನಿಕರು ಗಮನಿಸಿದಾಗ ತಕ್ಷಣವೇ ಧಾವಿಸಿದರು. ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.

ಎಲ್ಲಾ 27 ಜನರನ್ನು (06 ಮಾರಣಾಂತಿಕ ಸೇರಿದಂತೆ) ಆರಂಭದಲ್ಲಿ ಹತ್ತಿರದ ಮಿಲಿಟರಿ ಆಸ್ಪತ್ರೆ ಮತ್ತು ಟ್ಯಾಂಗ್‌ಸ್ಟೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು ಎಂದು ಸೇನೆಯು ಹೇಳಿದೆ.

"ಅವರನ್ನು ತರುವಾಯ ವಿಮಾನದ ಮೂಲಕ (ಮಿಲಿಟರಿ ALH ಮತ್ತು ಚೀಟಲ್ ಹೆಲಿಕಾಪ್ಟರ್‌ಗಳಿಂದ 14 ಸೋರ್ಟೀಸ್) ಲೇಹ್‌ನಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆರಂಭಿಕ ಪರೀಕ್ಷೆ ಮತ್ತು ಚಿಕಿತ್ಸೆಯ ನಂತರ 20 ಪ್ರಕರಣಗಳನ್ನು ಲೇಹ್‌ನ SNM ಆಸ್ಪತ್ರೆಗೆ ಕಳುಹಿಸಲಾಯಿತು ಮತ್ತು ಬೆನ್ನುಮೂಳೆಯ ಗಾಯಗೊಂಡ ಒಬ್ಬ ಗಾಯಾಳುವನ್ನು ಮಿಲಿಟರಿ ಆಸ್ಪತ್ರೆಯಲ್ಲಿ ಉಳಿಸಿಕೊಳ್ಳಲಾಯಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments