Webdunia - Bharat's app for daily news and videos

Install App

ಸ್ವಾತಂತ್ರ್ಯೋತ್ಸವ ಸಿದ್ಧತೆ ಮಾಡುತ್ತಿದ್ದಾಗ ಪ್ರಾಂಶುಪಾಲೆ ದುರ್ಮರಣ

Webdunia
ಮಂಗಳವಾರ, 16 ಆಗಸ್ಟ್ 2016 (10:16 IST)
ಸ್ವಾತಂತ್ರ್ಯೋತ್ಸವಕ್ಕಾಗಿ ತಯಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಶಾಲೆಯ ಪ್ರಾಂಶುಪಾಲೆ ದುರ್ಮರಣವನ್ನಪ್ಪಿದ ಹೃದಯವಿದ್ರಾವಕ ಘಟನೆ ಹೈದರಾಬಾದ್‌ನ ಮೆಡಿಕೊಂಡಾದಲ್ಲಿ ಭಾನುವಾರ ನಡೆದಿದೆ.

ಸ್ವಾತಂತ್ರ್ಯೋತ್ಸವದ ಮುನ್ನಾದಿನ ಧ್ವಜಸ್ತಂಭವನ್ನು ಸಿದ್ಧಪಡಿಸುತ್ತಿದ್ದ ಸಂದರ್ಭದಲ್ಲಿ ಸ್ತಂಭಕ್ಕೆ ವಿದ್ಯುತ್ ಕಂಬ ಬಡಿದು ವಿದ್ಯುತ್ ಪ್ರವಹಿಸಿದೆ. ಪರಿಣಾಮ ಅಲ್ಲೇ ಇದ್ದ ಪ್ರಾಂಶುಪಾಲೆ ಪ್ರಭಾವತಿ ಮತ್ತು ಇತರ ನಾಲ್ವರು ಮಕ್ಕಳಿಗೂ ವಿದ್ಯುತ್ ತಗಲಿದೆ. 
 
ಪ್ರಾಂಶುಪಾಲೆ ಪ್ರಭಾವತಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಮಾಡಲಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ.
 
ಸುಟ್ಟ ಗಾಯಗಳಿಂದ ಬಳಲುತ್ತಿರುವ ನಾಲ್ವರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. 
 
ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದ ಶಾಲೆ ಅಕ್ಷರಶಃ ಮಸಣವಾಗಿ ಬದಲಾಗಿದ್ದು ಮೃತರ ಕುಟುಂಬಸ್ಥರ ವಿದ್ಯಾರ್ಥಿಗಳ, ಗ್ರಾಮಸ್ಥರ ಶೋಕ ಮುಗಿಲು ಮುಟ್ಟಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments