Webdunia - Bharat's app for daily news and videos

Install App

ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ರಾಜದ್ರೋಹದ ಆರೋಪ ಹೊರಿಸುವಂತಿಲ್ಲ: ಸುಪ್ರೀಂಕೋರ್ಟ್

Webdunia
ಮಂಗಳವಾರ, 6 ಸೆಪ್ಟಂಬರ್ 2016 (18:30 IST)
ಸರ್ಕಾರ ಅಥವಾ ಅದರ ನೀತಿಗಳ ವಿರುದ್ಧ ಧ್ವನಿ ಎತ್ತಿದ ಮಾತ್ರಕ್ಕೆ ಆ ವ್ಯಕ್ತಿಯ ವಿರುದ್ಧ ರಾಜದ್ರೋಹದ ಆರೋಪಗಳನ್ನು ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ. ಅನೇಕ ಪ್ರಕರಣಗಳಲ್ಲಿ ರಾಜದ್ರೋಹದ ಆರೋಪಗಳನ್ನು ಹೇರಿದ ಬಳಿಕ ಉದ್ಭವಿಸಿದ ವಿವಾದದಿಂದ, ಕಾನೂನನ್ನು ರದ್ದುಗೊಳಿಸಬೇಕೆಂಬ ಬೇಡಿಕೆಗಳಿಗೆ ಕಿಡಿ ಹೊತ್ತಿದ ಬಳಿಕ ಸುಪ್ರೀಂಕೋರ್ಟ್‌‍ಗೆ ಸ್ಪಷ್ಟನೆ ನೀಡುವುದು ಅಗತ್ಯವಾಗಿ ಕಂಡುಬಂದಿದೆ.
 
 ಸುಪ್ರೀಂಕೋರ್ಟ್ ರಾಜದ್ರೋಹದ ಕಾನೂನಿನ ವಿವಾದವನ್ನು 1962ರಲ್ಲಿ ಇತ್ಯರ್ಥ ಮಾಡಿದ್ದು, ಯಾವ ಸಂದರ್ಭಗಳಲ್ಲಿ ರಾಜದ್ರೋಹದ ನಿಯಮ ಬಳಸಬೇಕೆಂದು ಸ್ಪಷ್ಟನೆ ನೀಡಿರುವುದಾಗಿ ದೀಪಕ್ ಮಿಶ್ರಾ ಮತ್ತು ಯುಯು ಲಲಿತ್ ಅವರಿದ್ದ ನ್ಯಾಯಪೀಠ ತಿಳಿಸಿತು.

ಕೇದಾರ್ ನಾಥ್ ವಿರುದ್ಧ ಬಿಹಾರ ರಾಜ್ಯದ ಪ್ರಕರಣದಲ್ಲಿ ಸಂವಿಧಾನ ಪೀಠ ಮಂಡಿಸಿದ ನಿಯಮಗಳನ್ನು ಪಾಲಿಸಬೇಕು ಎಂದು ಪೀಠವು ಹೇಳಿದೆ. 54 ವರ್ಷಗಳ ಹಿಂದೆ ಸಂವಿಧಾನ ಪೀಠ ರೂಪಿಸಿದ ಮಾರ್ಗದರ್ಶಿಗಳು ಪ್ರಸ್ತುತ ಸಂದರ್ಭದಲ್ಲಿ ಸೂಕ್ತವಾಗಿದೆ ಎಂದು ಹೇಳಿದ ಪೀಠವು ರಾಜದ್ರೋಹದ ವಿಷಯವನ್ನು ಮರುಪರಿಶೀಲನೆ ಮಾಡಲು ನಿರಾಕರಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments