Webdunia - Bharat's app for daily news and videos

Install App

ಆಧಾರ್ ಕಾರ್ಡ್ ಕುರಿತು ದೀಪಕ್ ಮಿಶ್ರಾ ಮಹತ್ವದ ತೀರ್ಪು ಇಲ್ಲಿದೆ ನೋಡಿ

Webdunia
ಬುಧವಾರ, 26 ಸೆಪ್ಟಂಬರ್ 2018 (14:14 IST)
ನವದೆಹಲಿ : ಸಿಜೆಐ ದೀಪಕ್ ಮಿಶ್ರಾ ಅವರು ನಿವೃತ್ತಿ(ಅ.2 ರಂದು)ಗೂ ಮುನ್ನ ಮಹತ್ವದ ಪ್ರಕರಣಗಳಿಗೆ ತೀರ್ಪನ್ನು ನೀಡುತ್ತಿದ್ದು, ಇದರಲ್ಲಿ ಒಂದಾದ ಆಧಾರ್ ಸಿಂಧುತ್ವ ಕುರಿತ ಪ್ರಕರಣಕ್ಕೆ ಇಂದು ಐವರು ಸದಸ್ಯರನ್ನೊಳಗೊಂಡ ಪೀಠ ಮಹತ್ವದ ತೀರ್ಪನ್ನು ನೀಡಿದ್ದು, ಈ ಮೂಲಕ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಕೋರ್ಟ್ ಎತ್ತಿಹಿಡಿದಿದೆ.


ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚಸದಸ್ಯ ಪೀಠ ಈ ಪ್ರಕರಣದ ವಿಚಾರಣೆಯನ್ನು ಕಳೆದ ಮಾರ್ಚ್ ತಿಂಗಳಿನಿಂದ ಆರಂಭಿಸಿತ್ತು. 12 ಅಂಕಿಗಳ ಆಧಾರ್ ಸಂಖ್ಯೆಯನ್ನು ಬಹುಮುಖ್ಯ ದಾಖಲೆಗಳೊಂದಿಗೆ ಜೋಡಿಸುವುದರಿಂದ ಖಾಸಗಿ ಮಾಹಿತಿ ಸೋರಿಕೆಯಾಗುವ ಸಂಭವವಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದೆ. ಖಾಸಗೀತನ ಮೂಲಭೂತ ಹಕ್ಕು ಎಂದು ಈಗಾಗಲೇ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿರುವುದು ಆಧಾರ್ ಕಡ್ಡಾಯ ಕ್ರಮದಿಂದ ಖಾಸಗೀತನಕ್ಕೆ ಧಕ್ಕೆಯಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದಂತಾಗಿತ್ತು.


ಸುಪ್ರೀಂ ಕೋರ್ಟ್ ಆದೇಶದಂತೆ ಆಧಾರ್ ಯಾವುದಕ್ಕೆ ಕಡ್ಡಾಯ/ ಯಾವುದಕ್ಕೆ ಕಡ್ಡಾಯವಲ್ಲ ಎಂಬ ಮಾಹಿತಿ ಇಲ್ಲಿದೆ ನೋಡಿ
ಇವುಗಳಿಗೆ ಆಧಾರ್ ಕಡ್ಡಾಯ:

ಸರ್ಕಾರದ ಯೋಜನೆಗಳಿಗೆ ಆಧಾರ್ ಕಡ್ಡಾಯ.

ಪಾನ್ ಕಾರ್ಡ್ ನೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ.

ಆದಾಯ ತೆರಿಗೆ ಪಾವತಿಗೂ ಆಧಾರ್ ಜೋಡಣೆ ಕಡ್ಡಾಯ.

ಇವುಗಳಿಗೆ ಆಧಾರ್ ಕಡ್ಡಾಯವಲ್ಲ:

ಬ್ಯಾಂಕ್ ಖಾತೆಗೆ ಆಧಾರ್ ಕಡ್ಡಾಯವಲ್ಲ.

ಮೊಬೈಲ್ ನಂಬರ್ ಗೆ ಆಧಾರ್ ಜೋಡಣೆ ಕಡ್ಡಾಯವಲ್ಲ.

ಶಾಲಾ-ಕಾಲೇಜುಗಳಲ್ಲಿ ಆಧಾರ್ ಕಡ್ಡಾಯವಲ್ಲ.

ಸಿಬಿಎಸ್‌ಇ, ನೀಟ್, ಯುಜಿಸಿಗೆ ಆಧಾರ್ ಕಡ್ಡಾಯವಲ್ಲ.

ಮೊಬೈಲ್ ಫೋನ್ ಗಳಿಗೆ ಆಧಾರ್ ಕಡ್ಡಾಯವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments