Webdunia - Bharat's app for daily news and videos

Install App

ಸೆಲ್ಫಿ ಹುಚ್ಚಿಗೆ 7 ಮಂದಿ ನೀರುಪಾಲು

Webdunia
ಗುರುವಾರ, 23 ಜೂನ್ 2016 (08:45 IST)
ಸೆಲ್ಫಿ ತೆಗೆದುಕೊಳ್ಳುವ ಹುಚ್ಚಿನಲ್ಲಿ 7 ವಿದ್ಯಾರ್ಥಿಗಳು ಗಂಗಾ ನದಿ ಪಾಲಾದ ಹೃದಯವಿದ್ರಾವಕ ಘಟನೆ ಕಾನ್ಪುರದಲ್ಲಿ ನಡೆದಿದೆ.

 
ಭಾರಿ ಮಳೆಯ ಬಳಿಕ 10 ವಿದ್ಯಾರ್ಥಿಗಳು ಗಂಗಾ ಬ್ಯಾರೇಜ್‌ಗೆ ಈಜಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ 7 ಜನರಲ್ಲಿ 19 ವರ್ಷದ ಯುವಕ ಶಿವಂ ಸ್ನಾನ ಮಾಡುವಾಗ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಕಾಲು ಜಾರಿ ಗಂಗಾ ಬ್ಯಾರೆಜ್‌‌‌ಗೆ ಬಿದ್ದಿದ್ದಾನೆ. ಆತ ನೀರಿನಲ್ಲಿ ಮುಳುಗತೊಡಗಿದಾಗ ಆತನನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ನೀರಿಗೆ ಜಿಗಿದಿದ್ದಾರೆ.  ಆದರೆ ಯಾರೂ ನೀರಿನಿಂದ ಮೇಲೆಳಲಾಗಲಿಲ್ಲ. 7 ಜನ ಸಹ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು 20ರ ಆಸುಪಾಸು ವಯಸ್ಸಿನವರಾಗಿದ್ದಾರೆ.
 
ಸ್ಥಳೀಯ ಮೀನುಗಾರರ ಸಹಾಯದಿಂದ ಘಟನೆ ನಡೆದ ಎರಡು ಗಂಟೆಗಳೊಳಗೆ ಮೃತ ವಿದ್ಯಾರ್ಥಿಗಳ ಮೃತದೇಹವನ್ನು ಮೇಲಕ್ಕೆ ಎತ್ತಲಾಗಿದ್ದು, ಮೃತರನ್ನು ಮಕ್ಸೂದ್(31), ಭೋಲಾ(16), ಸತ್ಯಂ(24) ಸಚಿನ್ ಗುಪ್ತಾ(21), ಭೋಲು ತಿವಾರಿ(20), ರೋಹಿತ್(20), ಶಿವಂ(19),  ಎಂದು ಗುರುತಿಸಲಾಗಿದೆ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. 
 
ಮುಂಬೈನಲ್ಲಿ ಕಳೆದ ಜನೇವರಿ ತಿಂಗಳಲ್ಲಿ ಇದೇ ರೀತಿಯ ಘಟನೆ ನಡೆದು ಮೂವರು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments