Webdunia - Bharat's app for daily news and videos

Install App

ಅತ್ಯಾಚಾರ ಸಂತ್ರಸ್ತೆ ಜತೆ ಸೆಲ್ಫಿ: ರಾಜೀನಾಮೆ ನೀಡಿದ ಸೌಮ್ಯ ಗುರ್ಜರ್

Webdunia
ಶುಕ್ರವಾರ, 1 ಜುಲೈ 2016 (11:16 IST)
ಅತ್ಯಾಚಾರ ಸಂತ್ರಸ್ತೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ದೇಶಾದ್ಯಂತ ಖಂಡನೆಗೆ ಒಳಗಾಗಿದ್ದ ರಾಜಸ್ತಾನದ ಮಹಿಳಾ ಆಯೋಗದ ಸದಸ್ಯೆ ಸೌಮ್ಯಾ ಗುರ್ಜರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ಅವರಿಗೆ ಸೌಮ್ಯಾ ತಮ್ಮ ರಾಜೀನಾಮೆಯನ್ನು ಹಸ್ತಾಂತರಿಸಿದ್ದಾರೆ.
 
ಸೌಮ್ಯ ಅವರ ವರ್ತನೆ ಅಸಂವೇದನೀಯ ಎಂದಿರುವ ಆಯೋಗದ ಅಧ್ಯಕ್ಷೆ ಅವರಿಗೆ ಸಮನ್ಸ್ ಕೂಡ ಜಾರಿ ಮಾಡಿದೆ. 
 
ಅತ್ಯಾಚಾರ ಪೀಡಿತೆ ಉತ್ತರ ಜೈಪುರದ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದಾಗ ಆಯೋಗದ ಸದಸ್ಯೆ ಸೌಮ್ಯ ಗುರ್ಜರ್ ಸೆಲ್ಫಿಯನ್ನು ಕ್ಲಿಕ್ಕಿಸಿಕೊಂಡಿದ್ದರು. 
 
ಗುರ್ಜರ್ ಸೆಲ್ಫಿ ಕ್ಲಿಕ್ಕಿಸುತ್ತಿರುವ ಎರಡು ಚಿತ್ರಗಳು ವಾಟ್ಸ್‌ಅಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡಿದ್ದು
ಅದರಲ್ಲೂ ಆಯೋಗದ ಮುಖ್ಯಸ್ಥೆ ಸುಮನ್ ಶರ್ಮಾರವರು ಸಹ ಈ ಸೆಲ್ಫಿಯಲ್ಲಿರುವುದು ಕಂಡು ಬಂದಿತ್ತು. ನಾನು ಪೀಡಿತೆಯ ಜತೆ ಸೆಲ್ಫಿಯನ್ನು ಕ್ಲಿಕ್ಕಿಸುತ್ತಿದ್ದಾಗ ಸದಸ್ಯೆ ಸೆಲ್ಫಿ ಕ್ಲಿಕ್ಕಿಸಿದರು. ಅವರು ಯಾವಾಗ ಸೆಲ್ಫಿ ತೆಗೆದರೆಂದು ನನಗೆ ಗೊತ್ತಾಗಲಿಲ್ಲ. ನಾನು ಈ ಕೃತ್ಯವನ್ನು ಖಂಡಿಸುತ್ತೇನೆ ಜತೆಗೆ ಅವರಿಂದ ನಾಳೆಯ ಒಳಗೆ ಸ್ಪಷ್ಟನೆಯನ್ನು ನೀಡುವಂತೆ ಕೇಳಿದ್ದೇನೆ ಎಂದು ಶರ್ಮಾ ಹೇಳಿದ್ದರು. ಬಳಿಕ ಗುರ್ಜರ್ ಅವರಿಗೆ ಸಮನ್ಸ್ ನೀಡಲಾಗಿತ್ತು. 
 
ನಾನು ದಾಖಲೆಗಳಿಗಾಗಿ ಆಕೆಯ ಫೋಟೋಗಳನ್ನು ಕ್ಲಿಕ್ಕಿಸುತ್ತಿದೆ. ಆಗ ಆಕೆ ಕ್ಯಾಮರಾ ಬಗ್ಗೆ ಆಸಕ್ತಿ ತೋರಿದಳು. ಅದೇನು ಎಂದು ಆಕೆ ಕೇಳಿದಾಗ ಇದು ಕ್ಯಾಮರಾ ಎಂದೆ. ಅದಕ್ಕವಳು ನನ್ನ ಪೋಟೋವನ್ನು ಸಹ ಕ್ಲಿಕ್ಕಿಸಿ ಎಂದಳು. ಆಕೆ ಕೇಳಿದಳೆಂದು, ಆಕೆಯ ಜತೆ ಸೆಲ್ಫಿ ತೆಗೆದುಕೊಂಡೆ, ಅವಳ ಜತೆ ಸಹಜವಾಗಿ ಬೆರೆತು ಹೀಗೆ ಮಾಡಿದೆ ಎಂದು ಗುರ್ಜರ್ ತಮ್ಮ ಕೃತ್ಯಕ್ಕೆ ಸಮರ್ಥನೆಯನ್ನು ನೀಡಿದ್ದಾರೆ. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments