Webdunia - Bharat's app for daily news and videos

Install App

ಇದನ್ನೋದಿದರೆ ನೀವು ಶಾಕ್‌ಗೊಳಗಾಗುವುದು ಖಂಡಿತ

Webdunia
ಸೋಮವಾರ, 27 ಫೆಬ್ರವರಿ 2017 (16:05 IST)
ಮಕ್ಕಳನ್ನು ಹೆತ್ತಿರುವ, ಪೋಷಿಸುತ್ತಿರುವ ಪೋಷಕರು ಎಚ್ಚೆತ್ತುಕೊಳ್ಳಲೇ ಬೇಕಾದ ಸಮಯವಿದು. ದೇಶದಲ್ಲಿ ಬಾಲಾಪರಾಧಗಳು ಮೀತಿಮೀರಿದ್ದು ಕೊಲೆ, ಲೈಂಗಿಕ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳು ಪದೇ ಪದೇ ಬೆಳಕಿಗೆ ಬರುತ್ತಿವೆ. ಇತ್ತೀಚಿಗೆ ದೆಹಲಿಯಲ್ಲಿ ನಡೆದ ಪ್ರಕರಣವೊಂದು ದೇಶವನ್ನೇ ಬೆಚ್ಚಿ ಬೀಳಿಸಿದೆ. 7 ವರ್ಷದ ಪುಟ್ಟ ಮಗುವಿನ ಮೇಲೆ ಆಕೆಯ ಸೀನಿಯರ್ಸ್ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಆರೋಪಿಗಳು ಹುಡುಗರು ಎಂದು ನೀವಂದುಕೊಂಡರೆ ಅದು ತಪ್ಪು. ಈ ಪ್ರಕರಣದ ಆರೋಪಿಗಳು ಮತ್ತು ಪೀಡಿತೆ ಇಬ್ಬರು ಬಾಲಕಿಯರೇ.
 
ರಾಷ್ಟ್ರೀಯ ಸುದ್ದಿವಾಹಿನಿಯೊಂದರಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ, ಮೋತಿನಗರ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಎರಡನೆಯ ತರಗತಿಯ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. 
 
ತನ್ನ ಸೀನಿಯರ್ಸ್‌ಗಳಿಂದಾಗುತ್ತಿರುವ ಶೋಷಣೆ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ವಿವರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ, ಮತ್ತೀಗ ಆಕೆಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು  ಆರೋಪಿಗಳ ವಿರುದ್ಧ ಐಪಿಸಿ ವಿಭಾಗ 328, 34 ಮತ್ತು ಪೋಸ್ಕೋ ಕಾಯಿದೆಯಡಿಯಲ್ಲಿ ದೂರು ದಾಖಲಾಗಿದೆ.
 
ಆರೋಪಿಗಳಿಬ್ಬರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬಳು 19 ವರ್ಷ ವಯಸ್ಸಿನವಳಾಗಿದ್ದಾಳೆ. ಅನೇಕ ಬಾರಿ ಅನುತ್ತೀರ್ಣಳಾಗಿದ್ದರಿಂದ ಆಕೆ ಇನ್ನು 9ನೇ ತರಗತಿಯಲ್ಲಿ ಓದುತ್ತಿದ್ದಾಳೆ ಎಂದು ತಿಳಿದು ಬಂದಿದೆ.
 
ಊಟದ ವಿರಾಮ ಮತ್ತು ಶಾಲೆ ಬಿಟ್ಟ ನಂತರ ಆಕೆಯನ್ನು ಖಾಲಿ ಇದ್ದ ಕೋಣೆಗಳಿಗೆ ಕೊಂಡೊಯ್ಯುತ್ತಿದ್ದ ಹುಡುಗಿಯರು ಆಕೆಯ ಬಟ್ಟೆ ಬಿಚ್ಚಿಸುತ್ತಿದ್ದರು ಮತ್ತು ಅಸಭ್ಯವಾಗಿ ವರ್ತಿಸುತ್ತಿದ್ದರು. ಅದಕ್ಕಾಕೆ ವಿರೋಧ ವ್ಯಕ್ತ ಪಡಿಸಿದಾಗ ಬೆದರಿಕೆ ಒಡ್ಡುತ್ತಿದ್ದರು ಎಂದು ತಿಳಿದು ಬಂದಿದೆ. 
 
ಬಾಲಕಿಯನ್ನೀಗ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಆಪ್ತ ಸಮಾಲೋಚನೆ ನಡೆಸಿ ಆಕೆಯಲ್ಲಿ ಹುಟ್ಟಿರುವ ಭಯವನ್ನು ಹೋಗಲಾಡಿಸುವ ಪ್ರಯತ್ನವನ್ನು ನಡೆಸಲಾಗುತ್ತಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ