Webdunia - Bharat's app for daily news and videos

Install App

ದೇಶದ್ರೋಹಿ ಮಸರತ್ ಆಲಂ ಬಂಧನ

Webdunia
ಶುಕ್ರವಾರ, 17 ಏಪ್ರಿಲ್ 2015 (09:10 IST)
ಕೇಂದ್ರ ಸರಕಾರ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ನ ಒತ್ತಡಕ್ಕೆ ಮಣಿದಿರುವ ಜಮ್ಮು ಮತ್ತು ಕಾಶ್ಮೀರ ಸರಕಾರ ಕೊನೆಗೂ ಪ್ರತ್ಯೇಕತಾವಾದಿ ಮಸ್ರತ್ ಆಲಂನನ್ನು ಬಂಧಿಸಿದೆ. ಶುಕ್ರವಾರ ಬೆಳಿಗ್ಗೆ ಆಲಂನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಇಂದು ಸಹ ಶ್ರೀನಗರದಲ್ಲಿ ಮೆರವಣಿಗೆಯನ್ನು ಮಾಡಲಿದ್ದ ಪ್ರತ್ಯೇಕತಾವಾದಿಗಳು ಪುನಃ ದೇಶದ್ರೋಹಿ ಚಟುವಟಿಕೆಗಳನ್ನು ಕೈಗೊಳ್ಳುವ ಸಾಧ್ಯತೆ ಇತ್ತು. 
 
ಇತ್ತೀಚಿಗಷ್ಟೇ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಆಲಂ ಶ್ರೀನಗರದಲ್ಲಿ ಪಾಕ್ ಧ್ವಜ ಹಾರಿಸಿ ದೇಶದ್ರೋಹಿ ಘೋಷಣೆಗಳನ್ನು ಕೂಗಿದ್ದ. ಇದು ದೇಶಾದ್ಯಂತ ತೀವೃ ಖಂಡನೆಗೆ ಗುರಿಯಾಗಿತ್ತು.
 
ಪ್ರಕಾರ ಆಲಂ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರ ಸರಕಾರಕ್ಕೆ  ಕೇಂದ್ರ ತಾಕೀತು ಮಾಡಿತ್ತು
ಅಲ್ಲದೇ ಮುಖ್ಯಮಂತ್ರಿ ಮುಫ್ತಿ ಮಹಮ್ಮದ್ ಸಯೀದ್ ಜತೆ ಮಾತನಾಡಿದ್ದ ಗೃಹ ಸಚಿವ ರಾಜನಾಥ್ ಸಿಂಗ್ ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ರಾಜಿ ಸಾಧ್ಯವಿಲ್ಲ ಎಂದಿದ್ದರು. ಅಲ್ಲದೇ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುತ್ತೇವೆ ಎಂದು ಬಿಜೆಪಿ ವರಿಷ್ಠರು ಹೇಳಿದ್ದರು. 
 
5 ವರ್ಷಗಳ ದೀರ್ಘಕಾಲದ ನಂತರ ಜಮ್ಮು ಮತ್ತು ಕಾಶ್ಮೀರ ಸರಕಾರ ಪ್ರತ್ಯೇಕತಾವಾದಿ ಗಿಲಾನಿಗೆ ಮೆರವಣಿಗೆ ನಡೆಸಲು ಅವಕಾಶ ಕೊಟ್ಟಿತ್ತು. ಅದರಲ್ಲಿ ಗಿಲಾನಿ ಬೆಂಬಲಿಗರಾದ ಮಸ್ರತ್ ಆಲಂ ಸೇರಿದಂತೆ ಹಲವರು ಪಾಕಿಸ್ತಾನ್ ಪರ ಘೋಷಣೆಗಳನ್ನು ಕೂಗಿ ಪಾಕ್ ಧ್ವಜವನ್ನು ಹಾರಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments