Webdunia - Bharat's app for daily news and videos

Install App

ಮುಗ್ಧ ಯುವಕರ ಜೀವ ಬಲಿಗೊಟ್ಟು ಕಾಶ್ಮೀರ ವಿಷಯ ಗಮನಸೆಳೆಯುವ ಪ್ರಯತ್ನ: ಬಿಜೆಪಿ ಆರೋಪ

Webdunia
ಬುಧವಾರ, 7 ಸೆಪ್ಟಂಬರ್ 2016 (19:15 IST)
ಪ್ರತ್ಯೇಕತಾವಾದಿಗಳು ಭಾರತದ ವಿರುದ್ಧ ಬದಲಿ ಯುದ್ಧ ನಡೆಸುತ್ತಿದ್ದಾರೆಂದು ಬಿಜೆಪಿ ಮಂಗಳವಾರ ಗಂಭೀರವಾದ ಆರೋಪ ಮಾಡಿದೆ. ಆಮದಾದ ಭಯೋತ್ಪಾದಕರ ನೆರವಿನಿಂದ ಮತ್ತು ಪಾಕಿಸ್ತಾನದ ಆರ್ಥಿಕ ನೆರವಿನಿಂದ ಅಜಾದಿ ಹೆಸರಿನಲ್ಲಿ ಪ್ರತ್ಯೇಕತಾವಾದಿಗಳು ಬದಲಿ ಯುದ್ಧ ನಡೆಸಿದ್ದಾರೆಂದು ಬಿಜೆಪಿ ಆರೋಪಿಸಿತು. ಕಣಿವೆಯಲ್ಲಿ ಪ್ರಸಕ್ತ ಅಶಾಂತಿಗೆ ನೆರೆಯ ರಾಷ್ಟ್ರದ ಪ್ರವರ್ತನೆಯೇ ಕಾರಣ ಎಂದು ಬಿಜೆಪಿ ರಾಜ್ಯ ವಕ್ತಾರ ಬಲ್ಬೀರ್ ರಾಮ್ ರತನ್ ತಿಳಿಸಿದರು.
 
ಪ್ರತ್ಯೇಕತಾವಾದಿಗಳು ಯುವಕರನ್ನು ದಾರಿತಪ್ಪಿಸುತ್ತಿದ್ದು, ಭದ್ರತಾ ಪಡೆಗಳ ವಿರುದ್ಧ ಸಂಘರ್ಷದಲ್ಲಿ ಮಾನವ ಕವಚಗಳಂತೆ ಯುವಕರನ್ನು ಬಳಸಿಕೊಳ್ಳುತ್ತಿದ್ದಾರೆ. ಈ ರೀತಿ ಪೂರ್ವನಿಯೋಜಿತ ರೀತಿಯಲ್ಲಿ ಯುವಕರ ಜೀವಗಳನ್ನು ಬಲಿಗೊಟ್ಟು ಜಗತ್ತಿನಲ್ಲಿ ಕಾಶ್ಮೀರ ವಿಷಯವನ್ನು ಗಮನಸೆಳೆಯುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪಿಸಿದರು.
 
ಕಾಶ್ಮೀರ ಸಮಸ್ಯೆಯು ಕಾಶ್ಮೀರದಲ್ಲಿನ ಸಮಸ್ಯೆಯಾಗಿದೆ. ಬಹುತೇಕ ಮಂದಿ ಕಾಶ್ಮೀರದಲ್ಲಿ ಶಾಂತಿ ಮತ್ತು ನೆಮ್ಮದಿ ಬಯಸಿದ್ದಾರೆ. ಆದರೆ ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಡಿಗೆ ಬಂಟರ ನೆರವಿನೊಂದಿಗೆ ಪಾಕಿಸ್ತಾನ ಸೃಷ್ಟಿಸಿದ ಪರಿಸ್ಥಿತಿಯನ್ನು ಸಹಿಸಿಕೊಳ್ಳಬೇಕಿದೆ ಎಂದು ರತನ್ ಟೀಕಿಸಿದರು.
 
ಕಾಶ್ಮೀರದಲ್ಲಿ ಸಮಸ್ಯೆಯು ಕೇಂದ್ರದ ಸತತ ಸರ್ಕಾರಗಳ ತಪ್ಪು ನೀತಿಗಳ ಫಲವಾಗಿದೆ. ಪ್ರತ್ಯೇಕತಾವಾದಿಗಳನ್ನು ಮತ್ತು ಪಟ್ಟಭದ್ರ ಹಿತಾಸಕ್ತಿಗಳಿಂದ ಕೂಡಿದ ರಾಜಕಾರಣಿಗಳನ್ನು ಸದಾ ಓಲೈಸುತ್ತಾ ಜನಸಮೂಹದ ಹಿತಾಸಕ್ತಿಗಳನ್ನು ಕಡೆಗಣಿಸಿದ ಫಲವಾಗಿದೆ ಎಂದು ಹೇಳಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ಮಳೆಯಿದೆಯೇ, ಎಲ್ಲೆಗೆ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಮುಂದಿನ ಸುದ್ದಿ
Show comments